<p><strong>ಸುರಪುರ</strong>: ‘ತಾಲ್ಲೂಕಿನ ಎಲ್ಲಾ ಶಾಲೆಗಳ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಬ್ಯಾನರ್, ಪೋಸ್ಟರ್, ಸ್ಕ್ರೀನ್ ಪರದೆಗಳಲ್ಲಿ ಶೇ 60ರಷ್ಟು ಕನ್ನಡ ಪದ ಬಳಕೆ ಮಾಡಲು ತಕ್ಷಣವೇ ಆದೇಶಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಭೈರಿಮರಡಿ ಆಗ್ರಹಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಗುರುವಾರ ಬಿಇಒ ಯಲ್ಲಪ್ಪ ಕಾಡ್ಲೂರು ಅವರಿಗೆ ಈ ಕುರಿತು ಮನವಿ ಸಲ್ಲಿಸಿದ ನಂತರ ಅವರು ಮಾತನಾಡಿದರು. ‘ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಹುತೇಕ ಶಾಲೆಯವರು ಬ್ಯಾನರ್, ಪೋಸ್ಟರ್, ಸ್ಕ್ರೀನ್ ಪರದೆಗಳಲ್ಲಿ ಇಂಗ್ಲೀಷ್ ಪದಗಳನ್ನು ಬಳಕೆ ಮಾಡುತ್ತಿರುವುದು ಬೆಳಕಿಗೆ ಬರುತ್ತಿದೆ. ಇದು ಸರಿಯಾದ ಕ್ರಮವಲ್ಲ’ ಎಂದು ದೂರಿದರು.</p>.<p>ಉಪಾಧ್ಯಕ್ಷ ನಾಗೇಂದ್ರ ದೊರೆ, ಸಂಚಾಲಕ ಮಲ್ಲಿಕಾರ್ಜುನ ರೊಡ್ಡರ, ವಿವಿಧ ಗ್ರಾಮ ಶಾಖೆಯ ಪದಾಧಿಕಾರಿಗಳಾದ ರಘುವೀರ ದೇಸಾಯಿ, ಶಿವು ಸಾಹುಕಾರ, ರಾಮುಲು ಬೇವಿನಾಳ, ಅಶೋಕ ನಾಯಕ, ಬಲಭೀಮ ಬಾದ್ಯಾಪುರ, ಮೌನೇಶ ಬಡಿಗೇರ, ಮಹಾರಾಜ ಹೆಮ್ಮಡಗಿ ಉಪಸ್ಥಿತರಿದ್ದರು. </p>
<p><strong>ಸುರಪುರ</strong>: ‘ತಾಲ್ಲೂಕಿನ ಎಲ್ಲಾ ಶಾಲೆಗಳ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ಬ್ಯಾನರ್, ಪೋಸ್ಟರ್, ಸ್ಕ್ರೀನ್ ಪರದೆಗಳಲ್ಲಿ ಶೇ 60ರಷ್ಟು ಕನ್ನಡ ಪದ ಬಳಕೆ ಮಾಡಲು ತಕ್ಷಣವೇ ಆದೇಶಿಸಬೇಕು’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕರವೇ ತಾಲ್ಲೂಕು ಘಟಕದ ಅಧ್ಯಕ್ಷ ವೆಂಕಟೇಶ ನಾಯಕ ಭೈರಿಮರಡಿ ಆಗ್ರಹಿಸಿದರು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಗುರುವಾರ ಬಿಇಒ ಯಲ್ಲಪ್ಪ ಕಾಡ್ಲೂರು ಅವರಿಗೆ ಈ ಕುರಿತು ಮನವಿ ಸಲ್ಲಿಸಿದ ನಂತರ ಅವರು ಮಾತನಾಡಿದರು. ‘ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಬಹುತೇಕ ಶಾಲೆಯವರು ಬ್ಯಾನರ್, ಪೋಸ್ಟರ್, ಸ್ಕ್ರೀನ್ ಪರದೆಗಳಲ್ಲಿ ಇಂಗ್ಲೀಷ್ ಪದಗಳನ್ನು ಬಳಕೆ ಮಾಡುತ್ತಿರುವುದು ಬೆಳಕಿಗೆ ಬರುತ್ತಿದೆ. ಇದು ಸರಿಯಾದ ಕ್ರಮವಲ್ಲ’ ಎಂದು ದೂರಿದರು.</p>.<p>ಉಪಾಧ್ಯಕ್ಷ ನಾಗೇಂದ್ರ ದೊರೆ, ಸಂಚಾಲಕ ಮಲ್ಲಿಕಾರ್ಜುನ ರೊಡ್ಡರ, ವಿವಿಧ ಗ್ರಾಮ ಶಾಖೆಯ ಪದಾಧಿಕಾರಿಗಳಾದ ರಘುವೀರ ದೇಸಾಯಿ, ಶಿವು ಸಾಹುಕಾರ, ರಾಮುಲು ಬೇವಿನಾಳ, ಅಶೋಕ ನಾಯಕ, ಬಲಭೀಮ ಬಾದ್ಯಾಪುರ, ಮೌನೇಶ ಬಡಿಗೇರ, ಮಹಾರಾಜ ಹೆಮ್ಮಡಗಿ ಉಪಸ್ಥಿತರಿದ್ದರು. </p>