ಯಾದಗಿರಿ: ಯಾದಗಿರಿ, ಗುರುಮಠಕಲ್ ಮತಕ್ಷೇತ್ರಗಳಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಲಾಗಿದೆ.
ಯಾದಗಿರಿಗೆ ಚನ್ನಾರೆಡ್ಡಿ ಪಾಟೀಲ ತುನ್ನೂರು, ಗುರುಮಠಕಲ್ ಕ್ಷೇತ್ರಕ್ಕೆ ಬಾಬುರಾವ ಚಿಂಚನಸೂರ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಾಗಿದೆ.
ಮೊದಲ ಪಟ್ಟಿಯಲ್ಲಿ ಶಹಾಪುರ ಹಾಲಿ ಶಾಸಕ ಶರಣಬಸಪ್ಪಗೌಡ ದರ್ಶನಾಪುರ, ಸುರಪುರ ಮತಕ್ಷೇತ್ರದಲ್ಲಿ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.
26 ಜನ ಆಕಾಂಕ್ಷಿಗಳು: ಯಾದಗಿರಿ ಮತ್ತು ಗುರುಮಠಕಲ್ ಮತಕ್ಷೇತ್ರದಲ್ಲಿ 26 ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿದ್ದರು. ಯಾದಗಿರಿಯಲ್ಲಿ 18 ಜನ ಟಿಕೆಟ್ ಆಕಾಂಕ್ಷಿಗಳು, ಗುರುಮಠಕಲ್ ಮತಕ್ಷೇತ್ರದಲ್ಲಿ 8 ಜನ ಆಕಾಂಕ್ಷಿಗಳಿದ್ದರು.