<p><strong>ಕೆಂಭಾವಿ:</strong> ‘ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಬಡವರ, ದೀನ ದಲಿತರ ರಕ್ಷಣೆಗೆ ಕಂಕಣ ಬದ್ಧವಾಗಿ ನಿಂತಿದೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲ್ಲೂಕು ಅಧ್ಯಕ್ಷ ಬೀರಲಿಂಗೇಶ ಬದ್ಯಾಪೂರ ಹೇಳಿದರು.</p>.<p>ಹೆಗ್ಗಣದೊಡ್ಡಿ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವ ಪದವಿಧರರಿಗೆ ಮಾಸಿಕ ಯುವನಿಧಿ ಯೋಜನೆ, ಮಹಿಳೆಯರ ಖಾತೆಗೆ ಮಾಸಿಕ ಹಣ ವರ್ಗಾವಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ನೀಡಿದೆ’ ಎಂದರು.</p>.<p>‘ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ಹೊಡೆತ ಬೀಳದೆ ಹಣಕಾಸು ವ್ಯವಸ್ಥೆಯಲ್ಲಿ ಬದಾಲಾವಣೆ ತರುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜನತೆಯ ಬೆನ್ನೆಲುಬಾಗಿ ಕೆಲಸ ಮಡುತ್ತಿದ್ದಾರೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷ ಹಳ್ಳೆಪ್ಪ ಹವಾಲ್ದಾರ, ಪಿಡಿಒ ರಾಮನಗೌಡ ದದ್ದಲ, ಧರ್ಮಿಬಾಯಿ ರಾಠೋಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಚಂದ್ರಶೇಖರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ‘ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಬಡವರ, ದೀನ ದಲಿತರ ರಕ್ಷಣೆಗೆ ಕಂಕಣ ಬದ್ಧವಾಗಿ ನಿಂತಿದೆ’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನದ ತಾಲ್ಲೂಕು ಅಧ್ಯಕ್ಷ ಬೀರಲಿಂಗೇಶ ಬದ್ಯಾಪೂರ ಹೇಳಿದರು.</p>.<p>ಹೆಗ್ಗಣದೊಡ್ಡಿ ಗ್ರಾಮ ಪಂಚಾಯತಿಯಲ್ಲಿ ಶುಕ್ರವಾರ ನಡೆದ ಪಂಚ ಗ್ಯಾರಂಟಿ ಅನುಷ್ಠಾನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಯುವ ಪದವಿಧರರಿಗೆ ಮಾಸಿಕ ಯುವನಿಧಿ ಯೋಜನೆ, ಮಹಿಳೆಯರ ಖಾತೆಗೆ ಮಾಸಿಕ ಹಣ ವರ್ಗಾವಣೆ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ನೀಡಿದೆ’ ಎಂದರು.</p>.<p>‘ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ಹೊಡೆತ ಬೀಳದೆ ಹಣಕಾಸು ವ್ಯವಸ್ಥೆಯಲ್ಲಿ ಬದಾಲಾವಣೆ ತರುವ ಮೂಲಕ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಜನತೆಯ ಬೆನ್ನೆಲುಬಾಗಿ ಕೆಲಸ ಮಡುತ್ತಿದ್ದಾರೆ’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷ ಹಳ್ಳೆಪ್ಪ ಹವಾಲ್ದಾರ, ಪಿಡಿಒ ರಾಮನಗೌಡ ದದ್ದಲ, ಧರ್ಮಿಬಾಯಿ ರಾಠೋಡ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು. ಚಂದ್ರಶೇಖರ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>