<p>ಯಾದಗಿರಿ: ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಆಲಮಟ್ಟಿಯಿಂದ ಒಳಹರಿವು ಹೆಚ್ಚಿದ್ದು, ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.</p>.<p>ಸದ್ಯ 25 ಗೇಟ್ಗಳ ಮೂಲಕ 2.50 ಲಕ್ಷ ಕ್ಯುಸೆಕ್ ನೀರು ಜಲಾಶಯದಿಂದ ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ನದಿಗೆ ಹರಿಸಿದರೆ ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಗ್ರಾಮದ ರಾಯಚೂರು-ಕಲಬುರಗಿ ಸಂಪರ್ಕ ಸೇತುವೆ ಕಡಿತವಾಗಲಿದೆ. ಇದರಿಂದ ಸುಮಾರು 90 ಕಿಮೀ ಸುತ್ತುವರಿದು ಸಂಚರಿಸುವ ಅನಿವಾರ್ಯತೆ ಸೃಷ್ಟಿಯಾಗಲಿದೆ.</p>.<p>ರೈತರು ನದಿಗೆ ಅಳವಡಿಸಿದ್ದ ಮೋಟರ್ಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ಪ್ರವಾಹ ಸಂಭವಿಸುವ ಗ್ರಾಮಗಳಿಗೆ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ. ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಮತ್ತು ಕೃಷ್ಣಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿನ ಮಳೆಯನ್ನು ಪರಿಗಣಿಸಿ ನಾರಾಯಣಪುರ ಅಣೆಕಟ್ಟಿನ ಒಳಹರಿವು ಸುಮಾರು 3 ಲಕ್ಷ ಕ್ಯುಸೆಕ್ ಆಗುವ ಸಾಧ್ಯತೆಯಿದೆ ಎಂದು ಡ್ಯಾಂ ಮೂಲಗಳು ತಿಳಿಸಿವೆ.</p>.<p>ನೀರಿನ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು, ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ಹೊರಹರಿವನ್ನು ಗುರುವಾರ ಸಂಜೆ 5ರಿಂದ ರಾತ್ರಿ 9ರ ವರೆಗಿನ ಅವಧಿಯಲ್ಲಿ 2.50 ಲಕ್ಷ ಕ್ಯುಸೆಕ್ನಿಂದ 3 ಲಕ್ಷ ಕ್ಯುಸೆಕ್ಗೆ ಹೆಚ್ಚಿಸಲಾಗುವುದು. ಒಳಹರಿವಿನ ಆಧಾರದ ಮೇಲೆ ಕೃಷ್ಣಾ ನದಿಗೆ ಮತ್ತಷ್ಟು ಹೊರಹರಿವನ್ನು ಹೆಚ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p><strong>ನದಿ ಪಾತ್ರದಲ್ಲಿ ಪ್ರವಾಹ ಸಾಧ್ಯತೆ: ಮುನ್ನೆಚ್ಚರಿಕೆಗೆ ಸೂಚನೆ</strong> </p><p>ಯಾದಗಿರಿ: ಕೃಷ್ಣಾ ನದಿಗೆ ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ 3ಲಕ್ಷ ಕ್ಯೂಸೆಕ್ ನೀರು ಹರಿ ಬಿಡುತ್ತಿರುವ ಕಾರಣ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಸಾಧ್ಯತೆಯಿದ್ದು ಜನ ನದಿಗೆ ಇಳಿಯದಂತೆ ಮತ್ತು ತಮ್ಮ ಜಾಣುವಾರುಗಳ ಸ ಮೇತಿ ಸುರಿಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಧೀಕಾರಿ ಸುಶೀಲಾ ಬಿ. ಅವರು ಕೋರಿದ್ದಾರೆ.</p>.<p><strong>ಸಹಾಯವಾಣಿ ಕೇಂದ್ರ ಆರಂಭ</strong> </p><p>ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳಲ್ಲಿ ದಿನವಿಡೀ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರ ಆರಂಭಿಸಿದ್ದು ಜನತೆಗೆ ಈ ಕುರಿತು ಸಮಸ್ಯೆ ದೂರುಗಳಿದ್ದರೆ ಕರೆ ಮಾಡಲು ಅವರು ತಿಳಿಸಿದ್ದಾರೆ. </p><p>ಜಿಲ್ಲಾಧಿಕಾರಿಗಳ ಕಛೇರಿ ಸಹಾಯವಾಣಿ ಕೇಂದ್ರ (08473-253950) </p><p>ಆಯಾ ತಹಶೀಲ್ದಾರ್ ಕಚೇರಿಗಳಲ್ಲಿನ ಸಹಾಯವಾಣಿ ಕೇಂದ್ರಗಳು </p><p>ಯಾದಗಿರಿ(ಮೊ. 99011 12994 08473-253611) </p><p>ಶಹಾಪುರ(94483 33545 08479-243321) </p><p>ಸುರಪುರ (9980265830 08443 256043) </p><p>ವಡಗೇರಾ (94497 33123 63600 77481) </p><p>ಹುಣಸಗಿ (99451 03885 90191 32429) ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ಹುಣಸಗಿ ತಾಲ್ಲೂಕಿನ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಆಲಮಟ್ಟಿಯಿಂದ ಒಳಹರಿವು ಹೆಚ್ಚಿದ್ದು, ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ.</p>.<p>ಸದ್ಯ 25 ಗೇಟ್ಗಳ ಮೂಲಕ 2.50 ಲಕ್ಷ ಕ್ಯುಸೆಕ್ ನೀರು ಜಲಾಶಯದಿಂದ ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಹೆಚ್ಚಿನ ಪ್ರಮಾಣದಲ್ಲಿ ನೀರು ನದಿಗೆ ಹರಿಸಿದರೆ ಶಹಾಪುರ ತಾಲ್ಲೂಕಿನ ಕೊಳ್ಳೂರು (ಎಂ) ಗ್ರಾಮದ ರಾಯಚೂರು-ಕಲಬುರಗಿ ಸಂಪರ್ಕ ಸೇತುವೆ ಕಡಿತವಾಗಲಿದೆ. ಇದರಿಂದ ಸುಮಾರು 90 ಕಿಮೀ ಸುತ್ತುವರಿದು ಸಂಚರಿಸುವ ಅನಿವಾರ್ಯತೆ ಸೃಷ್ಟಿಯಾಗಲಿದೆ.</p>.<p>ರೈತರು ನದಿಗೆ ಅಳವಡಿಸಿದ್ದ ಮೋಟರ್ಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ. ಪ್ರವಾಹ ಸಂಭವಿಸುವ ಗ್ರಾಮಗಳಿಗೆ ಜಿಲ್ಲಾಡಳಿತ ಎಚ್ಚರಿಕೆಯನ್ನು ನೀಡಿದೆ. ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಮತ್ತು ಕೃಷ್ಣಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿನ ಮಳೆಯನ್ನು ಪರಿಗಣಿಸಿ ನಾರಾಯಣಪುರ ಅಣೆಕಟ್ಟಿನ ಒಳಹರಿವು ಸುಮಾರು 3 ಲಕ್ಷ ಕ್ಯುಸೆಕ್ ಆಗುವ ಸಾಧ್ಯತೆಯಿದೆ ಎಂದು ಡ್ಯಾಂ ಮೂಲಗಳು ತಿಳಿಸಿವೆ.</p>.<p>ನೀರಿನ ಸುರಕ್ಷಿತ ಮಟ್ಟ ಕಾಯ್ದುಕೊಳ್ಳಲು, ನಾರಾಯಣಪುರ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ಹೊರಹರಿವನ್ನು ಗುರುವಾರ ಸಂಜೆ 5ರಿಂದ ರಾತ್ರಿ 9ರ ವರೆಗಿನ ಅವಧಿಯಲ್ಲಿ 2.50 ಲಕ್ಷ ಕ್ಯುಸೆಕ್ನಿಂದ 3 ಲಕ್ಷ ಕ್ಯುಸೆಕ್ಗೆ ಹೆಚ್ಚಿಸಲಾಗುವುದು. ಒಳಹರಿವಿನ ಆಧಾರದ ಮೇಲೆ ಕೃಷ್ಣಾ ನದಿಗೆ ಮತ್ತಷ್ಟು ಹೊರಹರಿವನ್ನು ಹೆಚ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ.</p>.<p><strong>ನದಿ ಪಾತ್ರದಲ್ಲಿ ಪ್ರವಾಹ ಸಾಧ್ಯತೆ: ಮುನ್ನೆಚ್ಚರಿಕೆಗೆ ಸೂಚನೆ</strong> </p><p>ಯಾದಗಿರಿ: ಕೃಷ್ಣಾ ನದಿಗೆ ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ 3ಲಕ್ಷ ಕ್ಯೂಸೆಕ್ ನೀರು ಹರಿ ಬಿಡುತ್ತಿರುವ ಕಾರಣ ಜಿಲ್ಲೆಯ ನದಿ ಪಾತ್ರದ ಗ್ರಾಮಗಳಲ್ಲಿ ಪ್ರವಾಹದ ಸಾಧ್ಯತೆಯಿದ್ದು ಜನ ನದಿಗೆ ಇಳಿಯದಂತೆ ಮತ್ತು ತಮ್ಮ ಜಾಣುವಾರುಗಳ ಸ ಮೇತಿ ಸುರಿಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಜಿಲ್ಲಾಧೀಕಾರಿ ಸುಶೀಲಾ ಬಿ. ಅವರು ಕೋರಿದ್ದಾರೆ.</p>.<p><strong>ಸಹಾಯವಾಣಿ ಕೇಂದ್ರ ಆರಂಭ</strong> </p><p>ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತಗಳಲ್ಲಿ ದಿನವಿಡೀ ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರ ಆರಂಭಿಸಿದ್ದು ಜನತೆಗೆ ಈ ಕುರಿತು ಸಮಸ್ಯೆ ದೂರುಗಳಿದ್ದರೆ ಕರೆ ಮಾಡಲು ಅವರು ತಿಳಿಸಿದ್ದಾರೆ. </p><p>ಜಿಲ್ಲಾಧಿಕಾರಿಗಳ ಕಛೇರಿ ಸಹಾಯವಾಣಿ ಕೇಂದ್ರ (08473-253950) </p><p>ಆಯಾ ತಹಶೀಲ್ದಾರ್ ಕಚೇರಿಗಳಲ್ಲಿನ ಸಹಾಯವಾಣಿ ಕೇಂದ್ರಗಳು </p><p>ಯಾದಗಿರಿ(ಮೊ. 99011 12994 08473-253611) </p><p>ಶಹಾಪುರ(94483 33545 08479-243321) </p><p>ಸುರಪುರ (9980265830 08443 256043) </p><p>ವಡಗೇರಾ (94497 33123 63600 77481) </p><p>ಹುಣಸಗಿ (99451 03885 90191 32429) ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>