<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಬುಧವಾರವೂ ತುಂತುರು ಮಳೆ ಮುಂದುವರಿದೆ. ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ. ಭತ್ತ, ಹತ್ತಿ, ತೊಗರಿ ಬೆಳೆ ನಾಶವಾಗಿದೆ.</p>.<p>ಭತ್ತ ಮಳೆಗಾಳಿಗೆ ನೆಲಕಚ್ಚಿದೆ. ಸಜ್ಜೆ ಬೆಳೆ ಮೊಳಕೆ ಹೊಡಿದಿವೆ. ಮೆಣಸಿನ ಗಿಡ ನೆಲಬಿಟ್ಟು ಮೇಲೆದ್ದಿಲ್ಲ.</p>.<p>ಶಹಾಪುರದಲ್ಲಿ ಬುಧವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದೆ. ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿವೆ. ಹತ್ತಿ ಬೆಳೆಗೆ ಹೆಚ್ಚಿನ ತೊಂದರೆಯಾಗಿದೆ. ತಾಲ್ಲೂಕಿನ ಭೀಮಾ, ಕೃಷ್ಣಾ ನದಿ ದಂಡೆಯ 44 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.</p>.<p>ಶೀತಗಾಳಿ ಬೀಸುತ್ತಿದ್ದು, ಜನತೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಭೀತಿ ಎದುರಾಗಿದೆ.</p>.<p>ಸೈದಾಪುರ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 11:30ರಿಂದ ಧಾರಾಕಾರ ಮಳೆಯಾಗಿದೆ. ಈಗ ಜಿಟಿಜಿಟಿ ಮಳೆ ಆರಂಭವಾಗಿದೆ. ಹೊಲಗಳೆಲ್ಲವು ನೀರಿನಿಂದ ತುಂಬಿಕೊಂಡು ಬೆಳೆ ನಾಶವಾಗುವ ಸಾಧ್ಯತೆ ಇದೆ.</p>.<p>'ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಜಿಲ್ಲಾಡಳಿತ ಕೂಡಲೇ ಎಚ್ಚೆತ್ತು ಪ್ರಾಮಾಣಿಕವಾಗಿ ವರದಿ ತಯಾರಿಸಿ ಬಡವರಿಗೆ, ರೈತರಿಗೆ ಅನುಕೂಲ ಮಾಡಿಕೊಡಬೇಕು' ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಜಿಲ್ಲೆಯಲ್ಲಿ ಬುಧವಾರವೂ ತುಂತುರು ಮಳೆ ಮುಂದುವರಿದೆ. ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ. ಭತ್ತ, ಹತ್ತಿ, ತೊಗರಿ ಬೆಳೆ ನಾಶವಾಗಿದೆ.</p>.<p>ಭತ್ತ ಮಳೆಗಾಳಿಗೆ ನೆಲಕಚ್ಚಿದೆ. ಸಜ್ಜೆ ಬೆಳೆ ಮೊಳಕೆ ಹೊಡಿದಿವೆ. ಮೆಣಸಿನ ಗಿಡ ನೆಲಬಿಟ್ಟು ಮೇಲೆದ್ದಿಲ್ಲ.</p>.<p>ಶಹಾಪುರದಲ್ಲಿ ಬುಧವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದೆ. ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿವೆ. ಹತ್ತಿ ಬೆಳೆಗೆ ಹೆಚ್ಚಿನ ತೊಂದರೆಯಾಗಿದೆ. ತಾಲ್ಲೂಕಿನ ಭೀಮಾ, ಕೃಷ್ಣಾ ನದಿ ದಂಡೆಯ 44 ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.</p>.<p>ಶೀತಗಾಳಿ ಬೀಸುತ್ತಿದ್ದು, ಜನತೆಯ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಭೀತಿ ಎದುರಾಗಿದೆ.</p>.<p>ಸೈದಾಪುರ ಹೋಬಳಿ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ 11:30ರಿಂದ ಧಾರಾಕಾರ ಮಳೆಯಾಗಿದೆ. ಈಗ ಜಿಟಿಜಿಟಿ ಮಳೆ ಆರಂಭವಾಗಿದೆ. ಹೊಲಗಳೆಲ್ಲವು ನೀರಿನಿಂದ ತುಂಬಿಕೊಂಡು ಬೆಳೆ ನಾಶವಾಗುವ ಸಾಧ್ಯತೆ ಇದೆ.</p>.<p>'ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿ ಕುರಿತು ಜಿಲ್ಲಾಡಳಿತ ಕೂಡಲೇ ಎಚ್ಚೆತ್ತು ಪ್ರಾಮಾಣಿಕವಾಗಿ ವರದಿ ತಯಾರಿಸಿ ಬಡವರಿಗೆ, ರೈತರಿಗೆ ಅನುಕೂಲ ಮಾಡಿಕೊಡಬೇಕು' ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>