<p><strong>ಯಾದಗಿರಿ:</strong> ಎಸ್ಎಸ್ಎಲ್ ಸಿ ಪರೀಕ್ಷೆ 1ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಶೇ 51.60 ರಷ್ಟು ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 7,759 ವಿದ್ಯಾರ್ಥಿಗಳು ಪಾಸಾಗಿದ್ದು, 39 ಜನ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.</p>.<p>ಜಿಲ್ಲೆಯ ವಿವಿಧ ಶಾಲೆಗಳ 39 ವಿದ್ಯಾರ್ಥಿಗಳು ಡಿಸ್ಟಿಕ್ಷಂನ್ ನಲ್ಲಿ ಪಾಸಾಗಿದ್ದಾರೆ. ಏಳು ಜನರು ಶೇ 99 ರಷ್ಟು, 24 ಜನ 98 ರಷ್ಟು ಹಾಗೂ 8 ವಿದ್ಯಾರ್ಥಿಗಳು ಶೇ 97 ರಷ್ಟು ಫಲಿತಾಂಶ ಪಡೆದಿದ್ದಾರೆ.</p>.<p>ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಮಾರ್ಚ್ ತಿಂಗಳಲ್ಲಿ ಕೊನೆ ಸ್ಥಾನ ಪಡೆದಿತ್ತು. ಪ್ರಸಕ್ತ ಸಾಲಿನಲ್ಲಿ ಒಟ್ಟು 15,036 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,138 ಬಾಲಕರು ಹಾಗೂ 4,621 ಬಾಲಕಿಯರು ಸೇರಿ ಒಟ್ಟು 7,759 ವಿದ್ಯಾರ್ಥಿಗಳು ಪಾಸಾಗಿದ್ದಾರೆ.</p>.<p>ರಾಜ್ಯದಲ್ಲಿ 33ನೇ ಸ್ಥಾನ ಗಳಿಸಿದೆ. ಕಳೆದ ಸಾಲಿನಲ್ಲಿ ಶೇ 54.53ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಯು ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ, ಎರಡು ಸ್ಥಾನಗಳು ಮೇಲೇರಿದೆ.</p>.<p>ನಗರದ ಶ್ರೀ ನವನಂದಿ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶ್ತಾ ಹಾಗೂ ಸುರಪುರ ತಾಲೂಕಿನ ಕವಡಿಮಟ್ಟಿಯ ಅಕ್ಷರ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ವರುಣ ಭಂಡಾರಿ ತಲಾ 622 ಅಂಕಗಳೊಂದಿಗೆ ಶೇ 99.52ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.</p>.<p>ಶಹಾಪುರ ತಾಲ್ಲೂಕಿನಲ್ಲಿ ಶೇ 52.33, ಸುರಪುರ ತಾಲ್ಲೂಕಿನಲ್ಲಿ ಶೆ 47.15, ಯಾದಗಿರಿ ತಾಲ್ಲೂಕಿನಲ್ಲಿ ಶೇ 54.96 ಫಲಿತಾಂಶ ಬಂದಿದೆ.</p>.<p>ಸರ್ಕಾರಿ ಶಾಲೆಗಳಲ್ಲಿ ಶೇ 48.70, ಅನುದಾನ ಸಹಿತ ಶೇ 38.94, ಅನುದಾನ ರಹಿತ ಶೇ 64.71 ಪ್ರತಿಶತ ಫಲಿತಾಂಶ ಬಂದಿದೆ.</p>.<p>ಜಿಲ್ಲೆಯ ಸುರಪುರ ತಾಲ್ಲೂಕಿನ ನಾಲ್ಕು ಶಾಲೆಗಳು ಹಾಗೂ ಶಹಾಪುರ ಮತ್ತು ಯಾದಗಿರಿ ತಾಲ್ಲೂಕಿನ ತಲಾ ಒಂದು ಶಾಲೆಗಳಿಗೆ ಶೇ 100ರಷ್ಟು ಫಲಿತಾಂಶ ಬಂದಿದೆ ಎಂದು ಡಿಡಿಪಿಐ ಸಿ.ಎಸ್.ಮುಧೋಳ ತಿಳಿಸಿದ್ದಾರೆ.</p>.<p>ತನ್ನ ತಂದೆಯ ನಿಧನದ ಶೋಕದ ನಡುವೆಯೂ ಯರಗೋಳ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ಕಂಚಗಾರಹಳ್ಳಿಯ ವಿದ್ಯಾರ್ಥಿ ಶ್ರೀಶೈಲ್ ಶೇ 71 ರಷ್ಟು ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ಎಸ್ಎಸ್ಎಲ್ ಸಿ ಪರೀಕ್ಷೆ 1ರ ಫಲಿತಾಂಶ ಶುಕ್ರವಾರ ಪ್ರಕಟವಾಗಿದ್ದು, ಶೇ 51.60 ರಷ್ಟು ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 7,759 ವಿದ್ಯಾರ್ಥಿಗಳು ಪಾಸಾಗಿದ್ದು, 39 ಜನ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.</p>.<p>ಜಿಲ್ಲೆಯ ವಿವಿಧ ಶಾಲೆಗಳ 39 ವಿದ್ಯಾರ್ಥಿಗಳು ಡಿಸ್ಟಿಕ್ಷಂನ್ ನಲ್ಲಿ ಪಾಸಾಗಿದ್ದಾರೆ. ಏಳು ಜನರು ಶೇ 99 ರಷ್ಟು, 24 ಜನ 98 ರಷ್ಟು ಹಾಗೂ 8 ವಿದ್ಯಾರ್ಥಿಗಳು ಶೇ 97 ರಷ್ಟು ಫಲಿತಾಂಶ ಪಡೆದಿದ್ದಾರೆ.</p>.<p>ಎಸ್ಎಸ್ಎಲ್ ಸಿ ಫಲಿತಾಂಶದಲ್ಲಿ ಮಾರ್ಚ್ ತಿಂಗಳಲ್ಲಿ ಕೊನೆ ಸ್ಥಾನ ಪಡೆದಿತ್ತು. ಪ್ರಸಕ್ತ ಸಾಲಿನಲ್ಲಿ ಒಟ್ಟು 15,036 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 3,138 ಬಾಲಕರು ಹಾಗೂ 4,621 ಬಾಲಕಿಯರು ಸೇರಿ ಒಟ್ಟು 7,759 ವಿದ್ಯಾರ್ಥಿಗಳು ಪಾಸಾಗಿದ್ದಾರೆ.</p>.<p>ರಾಜ್ಯದಲ್ಲಿ 33ನೇ ಸ್ಥಾನ ಗಳಿಸಿದೆ. ಕಳೆದ ಸಾಲಿನಲ್ಲಿ ಶೇ 54.53ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಯು ರಾಜ್ಯದಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆದರೆ, ಎರಡು ಸ್ಥಾನಗಳು ಮೇಲೇರಿದೆ.</p>.<p>ನಗರದ ಶ್ರೀ ನವನಂದಿ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಶ್ತಾ ಹಾಗೂ ಸುರಪುರ ತಾಲೂಕಿನ ಕವಡಿಮಟ್ಟಿಯ ಅಕ್ಷರ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ವರುಣ ಭಂಡಾರಿ ತಲಾ 622 ಅಂಕಗಳೊಂದಿಗೆ ಶೇ 99.52ರಷ್ಟು ಫಲಿತಾಂಶದೊಂದಿಗೆ ಜಿಲ್ಲೆಗೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ.</p>.<p>ಶಹಾಪುರ ತಾಲ್ಲೂಕಿನಲ್ಲಿ ಶೇ 52.33, ಸುರಪುರ ತಾಲ್ಲೂಕಿನಲ್ಲಿ ಶೆ 47.15, ಯಾದಗಿರಿ ತಾಲ್ಲೂಕಿನಲ್ಲಿ ಶೇ 54.96 ಫಲಿತಾಂಶ ಬಂದಿದೆ.</p>.<p>ಸರ್ಕಾರಿ ಶಾಲೆಗಳಲ್ಲಿ ಶೇ 48.70, ಅನುದಾನ ಸಹಿತ ಶೇ 38.94, ಅನುದಾನ ರಹಿತ ಶೇ 64.71 ಪ್ರತಿಶತ ಫಲಿತಾಂಶ ಬಂದಿದೆ.</p>.<p>ಜಿಲ್ಲೆಯ ಸುರಪುರ ತಾಲ್ಲೂಕಿನ ನಾಲ್ಕು ಶಾಲೆಗಳು ಹಾಗೂ ಶಹಾಪುರ ಮತ್ತು ಯಾದಗಿರಿ ತಾಲ್ಲೂಕಿನ ತಲಾ ಒಂದು ಶಾಲೆಗಳಿಗೆ ಶೇ 100ರಷ್ಟು ಫಲಿತಾಂಶ ಬಂದಿದೆ ಎಂದು ಡಿಡಿಪಿಐ ಸಿ.ಎಸ್.ಮುಧೋಳ ತಿಳಿಸಿದ್ದಾರೆ.</p>.<p>ತನ್ನ ತಂದೆಯ ನಿಧನದ ಶೋಕದ ನಡುವೆಯೂ ಯರಗೋಳ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದ ಕಂಚಗಾರಹಳ್ಳಿಯ ವಿದ್ಯಾರ್ಥಿ ಶ್ರೀಶೈಲ್ ಶೇ 71 ರಷ್ಟು ಅಂಕ ಪಡೆದು ಉತ್ತೀರ್ಣರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>