‘ಕಳೆದ ಬಾರಿ 14ನೇ ಸ್ಥಾನ ಪಡೆದಿದ್ದ ಉಡುಪಿ ಜಿಲ್ಲೆ ಈ ಬಾರಿ ಪ್ರಥಮ ಸ್ಥಾನ ಪಡೆದಿದೆ. ಇದು ಅಲ್ಲಿನ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರ ಹಾಗೂ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಶಿಸ್ತುಬದ್ಧ ಬೋಧನೆ, ಪ್ರತಿಫಲವಾಗಿದೆ. ಆದರೆ, ಇಲ್ಲಿನ ಜಿಲ್ಲಾಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣ ವಿಷಯದಲ್ಲಿ ಸೂಕ್ತ ಮೇಲ್ವಿಚಾರಣೆ ಮಾಡಿಲ್ಲ’ ಎನ್ನುತ್ತಾರೆ ಹಿರಿಯ ವಕೀಲ ಸಾಲೋಮನ್ ಆಲಫ್ರೆಡ್.
‘ಬಹುತೇಕ ಖಾಸಗಿ ಶಾಲೆಗಳಲ್ಲೂ ತರಬೇತಿ ಮತ್ತು ಕೌಶಲದ ಹೊಂದಿದ ಅರ್ಹ ಶಿಕ್ಷಕರಿಲ್ಲ. ಇಂಥ ಖಾಸಗಿ ಶಾಲೆಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಕೆಲಸ ಆಗಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಯಲ್ಲಿ ಹೆಸರಿಗೆ ಮಾತ್ರ ಇದ್ದು, ಜಿಲ್ಲೆಯನ್ನು ಉನ್ನತ ಮಟ್ಟಕ್ಕೆ ತರುವ ಪ್ರಯತ್ನ ಮಾಡುತ್ತಿಲ್ಲ’ ಎಂದು ಹೇಳಿದ್ದಾರೆ.