ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಮಾತನಾಡಿ, ಕಸಾಪ ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಜಾನಪದ ಇವೆಲ್ಲವುಗಳ ಸಂರಕ್ಷಣೆಯ ಜೊತೆಗೆ ಪ್ರಸಾರ ಹಾಗೂ ಅಭಿವೃದ್ಧಿ ಮೂಲ ಧ್ಯೇಯೋದ್ಧೇಶಗಳೊಂದಿಗೆ ಕಸಾಪವನ್ನು ಜನ ಸಾಮಾನ್ಯರ ಪರಿಷತ್ತನ್ನಾಗಿ ಮಾಡುವ ಏಕೈಕ ಸ್ವಾಯತ್ತ ಸಂಸ್ಥೆಯಾಗಿದೆ ಎಂದರು.