ಯಾದಗಿರಿಯ ಸಭೆಯನ್ನು ಮುಗಿಸಿಕೊಂಡ ನಂತರ ರಾಯಚೂರು ಜಿಲ್ಲೆಗೆ ತೆರಳುತ್ತಾರೆ. ರಾಜ್ಯಾಧ್ಯಕ್ಷರ ಜೊತೆಯಲ್ಲಿ ಬಿಜೆಪಿಯ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರೂಣಕುಮಾರ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್, ಕಲಬುರಗಿ ಸಂಸದ ಉಮೇಶ ಜಾದವ್, ಕಲಬುರಗಿ ವಿಭಾಗದ ಸಂಘಟನಾ ಪ್ರಾಭಾರಿ ರಾಜಕುಮಾರ ಪಾಟೀಲ್ ತೇಲ್ಕೂರ, ಯಾದಗಿರಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹಾಗೂ ಜಿಲ್ಲೆಯ ಎಲ್ಲಾ ಕ್ಷೇತ್ರಗಳ ಬಿಜೆಪಿ ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.