<p><strong>ಕೆಂಭಾವಿ:</strong> ಪಟ್ಟಣದ ನಾರಾಯಣಪೂರ ಮುಖ್ಯ ಕಾಲುವೆಯ ಮೇಲಿರುವ ಸೇತುವೆ ದುರಸ್ತಿಗೆ ಅಂತೂ ಕಾಲ ಕೂಡಿ ಬಂದಿದ್ದು ಬುಧವಾರ ಲೋಕೋಪಯೋಗಿ ಇಲಾಖೆ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.</p>.<p>ಸುರಪುರ-ಹುನಗುಂದ ರಾಜ್ಯ ಹೆದ್ದಾರಿಯ ಸೇತುವೆ ಅನೇಕ ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಸುಗಮ ಸಂಚಾರಕ್ಕೆ ಸಂಚಕಾರವಾಗಿತ್ತು. ನಿತ್ಯ ನೂರಾರು ವಾಹನಗಳು ಜೀವ ಕೈಯ್ಯಲ್ಲಿ ಹಿಡಿದು ಸಂಚಾರ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಪ್ರಜಾವಾಣಿ ವರದಿ ಪ್ರಕಟಿಸಿತ್ತು.</p>.<p>ಮಳೆಗಾಲದಲ್ಲಿ ರಸ್ತೆ ಕೆರೆಯಂತಾಗಿ ಸಂಚಾರ ಸ್ಥಗಿತವಾಗುತ್ತಿತ್ತು. ಈ ಬಗ್ಗೆ ಹಲವಾರು ಬಾರಿ ಸ್ಥಳೀಯರು ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ.</p>.<p>ಶಾಶ್ವತ ದುರಸ್ತಿಗೆ ಒತ್ತಾಯ: ಬುಧವಾರ ಪ್ರಾರಂಭವಾದ ಸೇತುವೆ ದುರಸ್ತಿ ಕಾರ್ಯ ಕೇವಲ ಕಂಕರ ಹಾಕಿ ಟ್ರಾಕ್ಟರ್ ಮೂಲಕ ರಸ್ತೆ ಸರಿಪಡಿಸಿದರೆ ಸಾಲದು. ಮಳೆಗಾಲದಲ್ಲಿ ದುರಸ್ತಿ ತಾತ್ಕಾಲಿಕವಾದರೆ ಮಳೆ ನೀರಿನಿಂದ ಮತ್ತೆ ಹದಗೆಡುತ್ತದೆ ಎಂದು ವಾಹನ ಸವಾರರು ಅಸಮಾಧಾನ ಹೊರಹಾಕಿದರು.</p>.<p>ಇಲಾಖೆ ಸೇತುವೆಯನ್ನು ಅಚ್ಚುಕ್ಟಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು. ಅಪಘಾತಗಖು ಸಂಭವಿಸದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-30-131286558</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ಪಟ್ಟಣದ ನಾರಾಯಣಪೂರ ಮುಖ್ಯ ಕಾಲುವೆಯ ಮೇಲಿರುವ ಸೇತುವೆ ದುರಸ್ತಿಗೆ ಅಂತೂ ಕಾಲ ಕೂಡಿ ಬಂದಿದ್ದು ಬುಧವಾರ ಲೋಕೋಪಯೋಗಿ ಇಲಾಖೆ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾರೆ.</p>.<p>ಸುರಪುರ-ಹುನಗುಂದ ರಾಜ್ಯ ಹೆದ್ದಾರಿಯ ಸೇತುವೆ ಅನೇಕ ವರ್ಷಗಳಿಂದ ಸಂಪೂರ್ಣ ಹದಗೆಟ್ಟು ಸುಗಮ ಸಂಚಾರಕ್ಕೆ ಸಂಚಕಾರವಾಗಿತ್ತು. ನಿತ್ಯ ನೂರಾರು ವಾಹನಗಳು ಜೀವ ಕೈಯ್ಯಲ್ಲಿ ಹಿಡಿದು ಸಂಚಾರ ಮಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಕುರಿತು ಪ್ರಜಾವಾಣಿ ವರದಿ ಪ್ರಕಟಿಸಿತ್ತು.</p>.<p>ಮಳೆಗಾಲದಲ್ಲಿ ರಸ್ತೆ ಕೆರೆಯಂತಾಗಿ ಸಂಚಾರ ಸ್ಥಗಿತವಾಗುತ್ತಿತ್ತು. ಈ ಬಗ್ಗೆ ಹಲವಾರು ಬಾರಿ ಸ್ಥಳೀಯರು ಅಧಿಕಾರಿಗಳು, ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿರಲಿಲ್ಲ.</p>.<p>ಶಾಶ್ವತ ದುರಸ್ತಿಗೆ ಒತ್ತಾಯ: ಬುಧವಾರ ಪ್ರಾರಂಭವಾದ ಸೇತುವೆ ದುರಸ್ತಿ ಕಾರ್ಯ ಕೇವಲ ಕಂಕರ ಹಾಕಿ ಟ್ರಾಕ್ಟರ್ ಮೂಲಕ ರಸ್ತೆ ಸರಿಪಡಿಸಿದರೆ ಸಾಲದು. ಮಳೆಗಾಲದಲ್ಲಿ ದುರಸ್ತಿ ತಾತ್ಕಾಲಿಕವಾದರೆ ಮಳೆ ನೀರಿನಿಂದ ಮತ್ತೆ ಹದಗೆಡುತ್ತದೆ ಎಂದು ವಾಹನ ಸವಾರರು ಅಸಮಾಧಾನ ಹೊರಹಾಕಿದರು.</p>.<p>ಇಲಾಖೆ ಸೇತುವೆಯನ್ನು ಅಚ್ಚುಕ್ಟಾಗಿ ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಬೇಕು. ಅಪಘಾತಗಖು ಸಂಭವಿಸದಂತೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-30-131286558</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>