<p>ಕೆಂಭಾವಿ: ಇಲ್ಲಿನ ಪುರಸಭೆಯಲ್ಲಿ ಗುರುವಾರ ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಪೊಲೀಸ್ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಸಭೆಯಲ್ಲಿ ₹1.53 ಕೋಟಿ ಅಂದಾಜು ಆಯವ್ಯಯ ಮಂಡಿಸಲಾಯಿತು.</p>.<p>ಸಭೆ ಆರಂಭವಾಗುತ್ತಿದ್ದಂತೆ ಪಟ್ಟಣದ ಸ್ವಚ್ಛತೆ ಮತ್ತು ನೈರ್ಮಲ್ಯ ಬಗ್ಗೆ ಎಲ್ಲ ಸದಸ್ಯರು ಧ್ವನಿ ಎತ್ತಿದರು.</p>.<p>ಸದಸ್ಯ ರವಿ ಸೊನ್ನದ ಮಾತನಾಡಿ,‘ಪಟ್ಟಣದಲ್ಲಿ ಕಳೆದ ಹಲವು ತಿಂಗಳಿನಿಂದ ಸ್ವಚ್ಛತೆ ಎಂಬುದು ಮಾಯವಾಗಿದೆ. ಮುಖ್ಯ ರಸ್ತೆಗಳಲ್ಲಿ ಕಸ, ಚರಂಡಿ ನೀರು ಹರಿಯುತ್ತಿದ್ದು, ಈ ಬಗ್ಗೆ ಆಡಳಿತ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಸದಸ್ಯರಾದ ಶಿವಶಂಕರ ಖಾನಾಪೂರ, ಆರೀಫ್ ಹುಸೇನ ಖಾಜಿ ಧ್ವನಿಗೂಡಿಸಿ, 23 ವಾರ್ಡ್ಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ಮಲೀನಗೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇದಕ್ಕೆ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ ಉತ್ತರಿಸಿ,‘ನಮ್ಮಲ್ಲಿ ಈಗ ಕೆಲವು ಸ್ವಚ್ಛತಾ ಸಿಬ್ಬಂದಿ ತರಬೇತಿಗೆ ತೆರಳಿದ್ದು ಬರುವ ಏ.1ರಿಂದ ಈ ಬಗ್ಗೆ ವಿಶೇಷ ತಂಡ ರಚನೆ ಮಾಡಿ ಎಲ್ಲ 23 ವಾರ್ಡ್ಗಳಲ್ಲಿ ಸ್ವಚ್ಛತೆ ಬಗ್ಗೆ ಗಮನ ಹರಿಸುವುದಾಗಿ ಸಮಜಾಯಿಸಿ ನೀಡಿದರು.</p>.<p>ಸದಸ್ಯ ಶ್ರೀಧರ ದೇಶಪಾಂಡೆ,‘ಕಳೆದ ಬಾರಿ ಕರ ವಸೂಲಾತಿಯಲ್ಲಿ ಪುರಸಭೆ ಹಿಂದೆ ಬಿದ್ದಿದ್ದು, ಇದು ಹೀಗೆ ಮುಂದುವರಿದರೆ ಸರ್ಕಾರದಿಂದ ಬರುವ ಅನುದಾನ ಕಡಿತವಾಗುವ ಸಂಭವವಿದೆ’ ಎಂದರು.</p>.<p>ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ, ಏ.1 ರಿಂದ ಕರವಸೂಲಿಯಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಪುರಸಭೆಯ ಪ್ರತಿಯೊಬ್ಬ ಸಿಬ್ಬಂದಿಗೆ ಇದರ ಜವಾಬ್ದಾರಿ ನೀಡಿ ಮನೆಮನೆಗೆ ತೆರಳಿ ವಿವಿಧ ಕರ ವಸೂಲಿ ಮಾಡಲಾಗುವುದು’ ಎಂದರು.</p>.<p>ಶರಣಪ್ಪ ಯಾಳಗಿ, ದೇವೇಂದ್ರಪ್ಪ ಟಣಕೆದಾರ ಸಭೆಯಲ್ಲಿ ಮಾತನಾಡಿದರು.</p>.<p>ಒಟ್ಟಾರೆ ಅಧಿಕಾರಿಗಳ ಮತ್ತು ಸದಸ್ಯರ ಟೀಕೆ ಟಿಪ್ಪಣಿಗಳ ಮಧ್ಯೆ ಬಜೆಟ್ ಸಭೆ ಮುಕ್ತಾಯವಾಯಿತು. ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ, ಪರಶುರಾಮ, ಸುರೇಂದ್ರ, ಕಾಶಿನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-30-855533196</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಂಭಾವಿ: ಇಲ್ಲಿನ ಪುರಸಭೆಯಲ್ಲಿ ಗುರುವಾರ ಪುರಸಭೆ ಅಧ್ಯಕ್ಷೆ ಪ್ರಿಯಾ ರಾಮನಗೌಡ ಪೊಲೀಸ್ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಸಭೆಯಲ್ಲಿ ₹1.53 ಕೋಟಿ ಅಂದಾಜು ಆಯವ್ಯಯ ಮಂಡಿಸಲಾಯಿತು.</p>.<p>ಸಭೆ ಆರಂಭವಾಗುತ್ತಿದ್ದಂತೆ ಪಟ್ಟಣದ ಸ್ವಚ್ಛತೆ ಮತ್ತು ನೈರ್ಮಲ್ಯ ಬಗ್ಗೆ ಎಲ್ಲ ಸದಸ್ಯರು ಧ್ವನಿ ಎತ್ತಿದರು.</p>.<p>ಸದಸ್ಯ ರವಿ ಸೊನ್ನದ ಮಾತನಾಡಿ,‘ಪಟ್ಟಣದಲ್ಲಿ ಕಳೆದ ಹಲವು ತಿಂಗಳಿನಿಂದ ಸ್ವಚ್ಛತೆ ಎಂಬುದು ಮಾಯವಾಗಿದೆ. ಮುಖ್ಯ ರಸ್ತೆಗಳಲ್ಲಿ ಕಸ, ಚರಂಡಿ ನೀರು ಹರಿಯುತ್ತಿದ್ದು, ಈ ಬಗ್ಗೆ ಆಡಳಿತ ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಸದಸ್ಯರಾದ ಶಿವಶಂಕರ ಖಾನಾಪೂರ, ಆರೀಫ್ ಹುಸೇನ ಖಾಜಿ ಧ್ವನಿಗೂಡಿಸಿ, 23 ವಾರ್ಡ್ಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿದು ಮಲೀನಗೊಳ್ಳುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಇದಕ್ಕೆ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ ಉತ್ತರಿಸಿ,‘ನಮ್ಮಲ್ಲಿ ಈಗ ಕೆಲವು ಸ್ವಚ್ಛತಾ ಸಿಬ್ಬಂದಿ ತರಬೇತಿಗೆ ತೆರಳಿದ್ದು ಬರುವ ಏ.1ರಿಂದ ಈ ಬಗ್ಗೆ ವಿಶೇಷ ತಂಡ ರಚನೆ ಮಾಡಿ ಎಲ್ಲ 23 ವಾರ್ಡ್ಗಳಲ್ಲಿ ಸ್ವಚ್ಛತೆ ಬಗ್ಗೆ ಗಮನ ಹರಿಸುವುದಾಗಿ ಸಮಜಾಯಿಸಿ ನೀಡಿದರು.</p>.<p>ಸದಸ್ಯ ಶ್ರೀಧರ ದೇಶಪಾಂಡೆ,‘ಕಳೆದ ಬಾರಿ ಕರ ವಸೂಲಾತಿಯಲ್ಲಿ ಪುರಸಭೆ ಹಿಂದೆ ಬಿದ್ದಿದ್ದು, ಇದು ಹೀಗೆ ಮುಂದುವರಿದರೆ ಸರ್ಕಾರದಿಂದ ಬರುವ ಅನುದಾನ ಕಡಿತವಾಗುವ ಸಂಭವವಿದೆ’ ಎಂದರು.</p>.<p>ಈ ಬಗ್ಗೆ ಸ್ಪಷ್ಟೀಕರಣ ನೀಡಿದ ಮುಖ್ಯಾಧಿಕಾರಿ ಪ್ರಕಾಶ ಬಾಗಲಿ, ಏ.1 ರಿಂದ ಕರವಸೂಲಿಯಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಪುರಸಭೆಯ ಪ್ರತಿಯೊಬ್ಬ ಸಿಬ್ಬಂದಿಗೆ ಇದರ ಜವಾಬ್ದಾರಿ ನೀಡಿ ಮನೆಮನೆಗೆ ತೆರಳಿ ವಿವಿಧ ಕರ ವಸೂಲಿ ಮಾಡಲಾಗುವುದು’ ಎಂದರು.</p>.<p>ಶರಣಪ್ಪ ಯಾಳಗಿ, ದೇವೇಂದ್ರಪ್ಪ ಟಣಕೆದಾರ ಸಭೆಯಲ್ಲಿ ಮಾತನಾಡಿದರು.</p>.<p>ಒಟ್ಟಾರೆ ಅಧಿಕಾರಿಗಳ ಮತ್ತು ಸದಸ್ಯರ ಟೀಕೆ ಟಿಪ್ಪಣಿಗಳ ಮಧ್ಯೆ ಬಜೆಟ್ ಸಭೆ ಮುಕ್ತಾಯವಾಯಿತು. ಉಪಾಧ್ಯಕ್ಷೆ ಲಕ್ಷ್ಮೀಬಾಯಿ ಕಂಬಾರ, ಪರಶುರಾಮ, ಸುರೇಂದ್ರ, ಕಾಶಿನಾಥ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-30-855533196</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>