<p><strong>ಕೆಂಭಾವಿ:</strong> ‘ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಂತಹಂತವಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈ ಆಸ್ಪತ್ರೆಗೆ ಹಲವು ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದಾರ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ಪಟ್ಟಣದಲ್ಲಿ ಬಹುದೊಡ್ಡ ಆಸ್ಪತ್ರೆ ನಿರ್ಮಾಣವಾಗಿದೆ. ಈ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವುದು ಸಾರ್ವಜನಿಕರ ಕರ್ತವ್ಯವಾಗಿದೆ’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕಾಳಜಿ ಮತ್ತು ಸಹಕಾರದಿಂದ ಈ ಆಸ್ಪತ್ರೆ ಮೇಲ್ದರ್ಜೆಗೇರಿದ್ದು, ಶೀಘ್ರವೇ ಇಲ್ಲಿ 50 ಹಾಸಿಗೆಗಳ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಈಗಾಗಲೇ ಕಟ್ಟಡ ಕಾಮಗಾರಿ ನಡೆದಿದ್ದು, ಪೂರ್ಣಗೊಂಡ ಬಳಿಕ ಹೈಟೆಕ್ ಆಸ್ಪತ್ರೆ ಕಾರ್ಯ ನಿರ್ವಹಿಸಲಿದೆ’ ಎಂದರು.</p>.<p>‘ಈ ಆಸ್ಪತ್ರೆಯಲ್ಲಿ ಹೊರರೋಗಿಗಳ ಸಂಖ್ಯೆ ಹೆಚ್ಚಿದ್ದು, ಅದಕ್ಕೆ ಬೇಕಾದ ಎಲ್ಲ ಔಷಧಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ನಂತರ ಆಸ್ಪತ್ರೆಯ ಎಲ್ಲ ವಿಭಾಗಗಳನ್ನು ಪರಿಶೀಲನೆ ನಡೆಸಿದರು.</p>.<p>ಆಡಳಿತ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಡಾ.ಸಿದ್ದು ನ್ಯಾಮಗೊಂಡ, ಡಾ.ರಾಹಿಲ್, ಮಂಜುಳಾ, ಸುಷ್ಮಾ, ಮಾಳಪ್ಪ, ಬಸಯ್ಯ, ರಮೇಶ, ಹಸೀನಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಭಾವಿ:</strong> ‘ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹಂತಹಂತವಾಗಿ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈ ಆಸ್ಪತ್ರೆಗೆ ಹಲವು ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ ಬಿರಾದಾರ ಹೇಳಿದರು.</p>.<p>ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ‘ಪಟ್ಟಣದಲ್ಲಿ ಬಹುದೊಡ್ಡ ಆಸ್ಪತ್ರೆ ನಿರ್ಮಾಣವಾಗಿದೆ. ಈ ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವುದು ಸಾರ್ವಜನಿಕರ ಕರ್ತವ್ಯವಾಗಿದೆ’ ಎಂದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವರ ವಿಶೇಷ ಕಾಳಜಿ ಮತ್ತು ಸಹಕಾರದಿಂದ ಈ ಆಸ್ಪತ್ರೆ ಮೇಲ್ದರ್ಜೆಗೇರಿದ್ದು, ಶೀಘ್ರವೇ ಇಲ್ಲಿ 50 ಹಾಸಿಗೆಗಳ ಆಸ್ಪತ್ರೆ ಕಾರ್ಯಾರಂಭ ಮಾಡಲಿದೆ. ಈಗಾಗಲೇ ಕಟ್ಟಡ ಕಾಮಗಾರಿ ನಡೆದಿದ್ದು, ಪೂರ್ಣಗೊಂಡ ಬಳಿಕ ಹೈಟೆಕ್ ಆಸ್ಪತ್ರೆ ಕಾರ್ಯ ನಿರ್ವಹಿಸಲಿದೆ’ ಎಂದರು.</p>.<p>‘ಈ ಆಸ್ಪತ್ರೆಯಲ್ಲಿ ಹೊರರೋಗಿಗಳ ಸಂಖ್ಯೆ ಹೆಚ್ಚಿದ್ದು, ಅದಕ್ಕೆ ಬೇಕಾದ ಎಲ್ಲ ಔಷಧಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ನಂತರ ಆಸ್ಪತ್ರೆಯ ಎಲ್ಲ ವಿಭಾಗಗಳನ್ನು ಪರಿಶೀಲನೆ ನಡೆಸಿದರು.</p>.<p>ಆಡಳಿತ ವೈದ್ಯಾಧಿಕಾರಿ ಡಾ.ಗಿರೀಶ ಕುಲಕರ್ಣಿ, ಡಾ.ಸಿದ್ದು ನ್ಯಾಮಗೊಂಡ, ಡಾ.ರಾಹಿಲ್, ಮಂಜುಳಾ, ಸುಷ್ಮಾ, ಮಾಳಪ್ಪ, ಬಸಯ್ಯ, ರಮೇಶ, ಹಸೀನಾ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>