ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಕೃಷ್ಣಾ ನದಿಗೆ ಒಳಹರಿವು, ಹೊರಹರಿವು ಹೆಚ್ಚಳ; ಎಚ್ಚರಿಕೆ

Last Updated 12 ಆಗಸ್ಟ್ 2022, 5:12 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಶುಕ್ರವಾರ 2 ಲಕ್ಷ ಕ್ಯುಸೆಕ್ ನೀರು ಹರಿಸುತ್ತಿದ್ದು, ಬೆಳಿಗ್ಗೆ 10 ಗಂಟೆ ನಂತರ 2.25 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗುವುದು ಎಂದು ಡ್ಯಾಂ ಮೂಲಗಳು ತಿಳಿಸಿವೆ.‌

ಜಲಾನಯನ ಪ್ರದೇಶದಲ್ಲಿ ಮೇಲ್ಮಟ್ಟದ ಮಳೆಯಿಂದಾಗಿ, ಆಲಮಟ್ಟಿ ಜಲಾಶಯದಿಂದ ಹೊರಹರಿವು 2 ಲಕ್ಷ ಕ್ಯುಸೆಕ್‌ನಿಂದ 2.25 ಲಕ್ಷ ಕ್ಯುಸೆಕ್‌ಗೆ ಬೆಳಿಗ್ಗೆ 10 ಗಂಟೆಗೆ ಹೆಚ್ಚಿಸಲಾಗುವುದು. ಆದಕಾರಣ ನಾರಾಯಣಪುರ ಆಣೆಕಟ್ಟಿನಿಂದ ಕೃಷ್ಣಾ ನದಿಗೆ ಹೊರಹರಿವು ಕ್ರಮೇಣ 2.30 ಲಕ್ಷ ಕ್ಯುಸೆಕ್‌ಗೆ ಬೆಳಿಗ್ಗೆ 11 ಗಂಟೆಯೊಳಗೆ ಹೆಚ್ಚಿಸಲಾಗುವುದು. ನಾರಾಯಣಪುರ ಡ್ಯಾಂಗೆ ಒಳಹರಿವಿನ ಆಧಾರದ ಮೇಲೆ ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಡ್ಯಾಂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT