ನಗರದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಗುರುವಾರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಅನುಷ್ಠಾನ ಕುರಿತು ನಡೆದ ಸಭೆಯಲ್ಲಿ ಅವರು ಮಾತನಾಡಿದರು.
‘ಕಂದಾಯ, ಗ್ರಾಮೀಣಾಭಿವೃದ್ಧಿ, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ತಮಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಯೋಜನೆಯ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ರೈತರಿಂದ ಸರ್ವೇ ನಂಬರ್, ಆಧಾರ್ ಕಾರ್ಡ್, ಆಧಾರ್ ಸಂಖ್ಯೆ ಜೋಡಣೆ ಮಾಡಿದ ಬ್ಯಾಂಕ್ ಪಾಸ್ಬುಕ್ ನಕಲು ಪ್ರತಿಗಳೊಂದಿಗೆ ಸ್ವಯಂಘೋಷಣಾ ಪತ್ರ ಪಡೆದು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಬೇಕು’ ಎಂದರು.
‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿಯಲ್ಲಿ ಪ್ರತಿ ರೈತ ಕುಟುಂಬಕ್ಕೆ ಒಂದು ವರ್ಷಕ್ಕೆ ₹ 6 ಸಾವಿರ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಎರಡನೇಮತ್ತು ಮೂರನೆಯ ಕಂತುಗಳಿಗೆ ರೈತರಿಂದ ಪದೇಪದೇ ಮಾಹಿತಿ ಸಂಗ್ರಹಿಸುವ ಅಗತ್ಯವಿಲ್ಲ. ಆಧಾರ್ ಸಂಖ್ಯೆ ಜೋಡಣೆ ಮಾಡಿದ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಆಗುತ್ತದೆ’ ಎಂದು ಮಾಹಿತಿ ನೀಡಿದರು.