ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಶೋರಚಂದ್ ಜೈನ್‍ಗೆ ಶ್ರೇಷ್ಠ ವರ್ತಕ ಪ್ರಶಸ್ತಿ

Last Updated 26 ಸೆಪ್ಟೆಂಬರ್ 2021, 15:58 IST
ಅಕ್ಷರ ಗಾತ್ರ

ಸುರಪುರ: ನಗರದ ಉದ್ಯಮಿ ಮತ್ತು ಗಂಜ್ ವರ್ತಕರ ಸಂಘದ ಅಧ್ಯಕ್ಷ ಕಿಶೋರಚಂದ್ ಸಿ.ಜೈನ್ ಅವರು ಶ್ರೇಷ್ಠ ವರ್ತಕ ಪ್ರಶಸ್ತಿ ಪಡೆದಿದ್ದಾರೆ.

ಶನಿವಾರ ಗದಗನಲ್ಲಿ ಗದಗ ಜಿಲ್ಲಾ ವಾಣಿಜ್ಯೋದ್ಯಮಿ ಸಂಸ್ಥೆ ವತಿಯಿಂದ ಪರಿವರ್ತನ- ಉತ್ತರ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಮ್ಮೇಳನ 2021- 22 ಸಮಾರಂಭದಲ್ಲಿಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಪ್ರಶಸ್ತಿ ಪ್ರದಾನ ಮಾಡಿದರು.

ಉದ್ಯಮ ಕ್ಷೇತ್ರದಲ್ಲಿ ಸಾಧಿಸಿದ ಸಾಧನೆಯನ್ನು ಪರಿಗಣಿಸಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಸಿ.ಸಿ.ಪಾಟೀಲ, ಹಾಲಪ್ಪ ಆಚಾರ್, ಗದಗ ಶಾಸಕ ಎಚ್.ಕೆ.ಪಾಟೀಲ, ಗದಗ ವಾಣಿಜ್ಯೋದ್ಯಮಿ ಸಂಸ್ಥೆಯ ಕಾರ್ಯದರ್ಶಿ ವೀರೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT