<p>ಯಾದಗಿರಿ: ‘ಇಂದಿನ ಸಮಾಜದಲ್ಲಿನ ಸಾಮಾಜಿಕ ದೌರ್ಜನ್ಯ, ಭ್ರಷ್ಟಾಚಾರ ಮತ್ತು ಅನ್ಯಾಯದ ವಿರುದ್ಧ ಹೋರಾಟಕ್ಕೆ ಕಿತ್ತೂರು ರಾಣಿ ಚನ್ನಮ್ಮ ಅವರ ಬದುಕು, ಬ್ರಿಟಿಷರ ವಿರುದ್ಧದ ಅವರ ಹೋರಾಟ ನಮಗೆಲ್ಲಾ ಸ್ಪೂರ್ತಿಯಾಗಲಿ’ ಉಪವಿಭಾಗಾಧಿಕಾರಿ ಶ್ರೀಧರ ಗೋಟೂರು ಅಭಿಪ್ರಾಯಪಟ್ಟರು.</p>.<p>ನಗರದ ಜಿಲ್ಲಾ ಕಸಾಪ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಣಿ ಚನ್ನಮ್ಮ ಅವರು ಕುದುರೆ ಸವಾರಿ, ಕತ್ತಿವರಸೆ ಕಲಿತು ಬ್ರಿಟಿಷರ ವಿರುದ್ಧ ಹೋರಾಡಿದರು. ನಾವೀಗ ನಮ್ಮ ದೇಶದಲ್ಲಿನ ಸಂಕಷ್ಟಗಳು, ದೌರ್ಜನ್ಯಗಳ ವಿರುದ್ಧ ಹೋರಾಡುವ ಅಗತ್ಯವಿದೆ’ ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಗುರುಸಿದ್ದಪ್ಪಗೌಡ ಪಾಟೀಲ ಉಪನ್ಯಾಸ ನೀಡಿ, ‘ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಮೊದಲ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ. ಅವರು ಪಂಚಮಸಾಲಿ ಸಮುದಾಯದ ಹೆಮ್ಮೆ’ ಎಂದರು.</p>.<p>‘ಭಾರತದ ಇತಿಹಾಸದಲ್ಲಿ ಚನ್ನಮ್ಮಾಜಿ ಅವರು ನಕ್ಷತ್ರದಂತೆ ಹೊಳೆಯತ್ತಾರೆ. ಆದರೆ, ಅವರ ಅರಮನೆಯ ಭ್ರಷ್ಟ ಮಲ್ಲಪ್ಪ ಶೆಟ್ಟಿಯಿಂದಾಗಿ ಮೋಸಕ್ಕೊಳಗಾದರು. ಈಗಲೂ ಮಲ್ಲಪ್ಪ ಶೆಟ್ಟಿಯಂತಾ ಭ್ರಷ್ಟರಿದ್ದಾರೆ’ ಎಂದು ಹೇಳಿದರು.</p>.<p>ಇತರ ಸಂಸ್ಥಾನಗಳಂತೆ ಬ್ರಿಟೀಷರೊಂದಿಗೆ ಒಪ್ಪಂದ ಮಾಡಿಕೊಂಡು ಅರಾಮವಾಗಿರಬಹುದಿತ್ತು. ಆದರೆ, ನಾಡಿನ ಸ್ವಾತಂತ್ರ್ಯಕ್ಕಾಗಿ ಅವರು ಹೋರಾಟದ ಹಾದಿ ಹಿಡಿದರು. ಕಿತ್ತೂರಿನ ಸೈನ್ಯ ಬ್ರಿಟೀಷರನ್ನು ಸೋಲಿಸಿತ್ತು. ಬ್ರಿಟೀಷರು ಮನವಿ ಮಾಡಿದಾಗ ಸೆರೆಸಿಕ್ಕ ಬ್ರಿಟೀಷ ಸೈನಿಕರನ್ನು ಬಿಡುಗಡೆ ಮಾಡಿದ್ದರು’ ಎಂದು ವಿವರಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಡ್ಲೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತಾರದೇವಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಪಾಟೀಲ ಉಪಸ್ಥಿತರಿದ್ದರು.</p>.<p>Quote - ಯುವಕರು ಮಹನೀಯರ ಬದುಕಿನಿಂದ ಪ್ರೇರಣೆಯಾಗಿ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ ಹೋರಾಟದ ಪರಂಪರೆಯನ್ನ ಉಳಿಸಿದರೆ ಜಯಂತಿ ಆಚರಣೆಗೆ ಅರ್ಥ ಮತ್ತು ಬದುಕಿಗೂ ಗೌರವ ಕೊಟ್ಟಂತೆ. ಶ್ರೀಧರ ಗೋಟೂರು ಯಾದಗಿರಿ ಉಪವಿಭಾಗಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಾದಗಿರಿ: ‘ಇಂದಿನ ಸಮಾಜದಲ್ಲಿನ ಸಾಮಾಜಿಕ ದೌರ್ಜನ್ಯ, ಭ್ರಷ್ಟಾಚಾರ ಮತ್ತು ಅನ್ಯಾಯದ ವಿರುದ್ಧ ಹೋರಾಟಕ್ಕೆ ಕಿತ್ತೂರು ರಾಣಿ ಚನ್ನಮ್ಮ ಅವರ ಬದುಕು, ಬ್ರಿಟಿಷರ ವಿರುದ್ಧದ ಅವರ ಹೋರಾಟ ನಮಗೆಲ್ಲಾ ಸ್ಪೂರ್ತಿಯಾಗಲಿ’ ಉಪವಿಭಾಗಾಧಿಕಾರಿ ಶ್ರೀಧರ ಗೋಟೂರು ಅಭಿಪ್ರಾಯಪಟ್ಟರು.</p>.<p>ನಗರದ ಜಿಲ್ಲಾ ಕಸಾಪ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಾಣಿ ಚನ್ನಮ್ಮ ಅವರು ಕುದುರೆ ಸವಾರಿ, ಕತ್ತಿವರಸೆ ಕಲಿತು ಬ್ರಿಟಿಷರ ವಿರುದ್ಧ ಹೋರಾಡಿದರು. ನಾವೀಗ ನಮ್ಮ ದೇಶದಲ್ಲಿನ ಸಂಕಷ್ಟಗಳು, ದೌರ್ಜನ್ಯಗಳ ವಿರುದ್ಧ ಹೋರಾಡುವ ಅಗತ್ಯವಿದೆ’ ಎಂದರು.</p>.<p>ನಿವೃತ್ತ ಪ್ರಾಂಶುಪಾಲ ಗುರುಸಿದ್ದಪ್ಪಗೌಡ ಪಾಟೀಲ ಉಪನ್ಯಾಸ ನೀಡಿ, ‘ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ್ದ ಮೊದಲ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ. ಅವರು ಪಂಚಮಸಾಲಿ ಸಮುದಾಯದ ಹೆಮ್ಮೆ’ ಎಂದರು.</p>.<p>‘ಭಾರತದ ಇತಿಹಾಸದಲ್ಲಿ ಚನ್ನಮ್ಮಾಜಿ ಅವರು ನಕ್ಷತ್ರದಂತೆ ಹೊಳೆಯತ್ತಾರೆ. ಆದರೆ, ಅವರ ಅರಮನೆಯ ಭ್ರಷ್ಟ ಮಲ್ಲಪ್ಪ ಶೆಟ್ಟಿಯಿಂದಾಗಿ ಮೋಸಕ್ಕೊಳಗಾದರು. ಈಗಲೂ ಮಲ್ಲಪ್ಪ ಶೆಟ್ಟಿಯಂತಾ ಭ್ರಷ್ಟರಿದ್ದಾರೆ’ ಎಂದು ಹೇಳಿದರು.</p>.<p>ಇತರ ಸಂಸ್ಥಾನಗಳಂತೆ ಬ್ರಿಟೀಷರೊಂದಿಗೆ ಒಪ್ಪಂದ ಮಾಡಿಕೊಂಡು ಅರಾಮವಾಗಿರಬಹುದಿತ್ತು. ಆದರೆ, ನಾಡಿನ ಸ್ವಾತಂತ್ರ್ಯಕ್ಕಾಗಿ ಅವರು ಹೋರಾಟದ ಹಾದಿ ಹಿಡಿದರು. ಕಿತ್ತೂರಿನ ಸೈನ್ಯ ಬ್ರಿಟೀಷರನ್ನು ಸೋಲಿಸಿತ್ತು. ಬ್ರಿಟೀಷರು ಮನವಿ ಮಾಡಿದಾಗ ಸೆರೆಸಿಕ್ಕ ಬ್ರಿಟೀಷ ಸೈನಿಕರನ್ನು ಬಿಡುಗಡೆ ಮಾಡಿದ್ದರು’ ಎಂದು ವಿವರಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ ಕಾಡ್ಲೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತಾರದೇವಿ, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಮಲ್ಲಣ್ಣಗೌಡ ಪಾಟೀಲ ಉಪಸ್ಥಿತರಿದ್ದರು.</p>.<p>Quote - ಯುವಕರು ಮಹನೀಯರ ಬದುಕಿನಿಂದ ಪ್ರೇರಣೆಯಾಗಿ ದೌರ್ಜನ್ಯಗಳ ವಿರುದ್ಧ ಧ್ವನಿ ಎತ್ತಿ ಹೋರಾಟದ ಪರಂಪರೆಯನ್ನ ಉಳಿಸಿದರೆ ಜಯಂತಿ ಆಚರಣೆಗೆ ಅರ್ಥ ಮತ್ತು ಬದುಕಿಗೂ ಗೌರವ ಕೊಟ್ಟಂತೆ. ಶ್ರೀಧರ ಗೋಟೂರು ಯಾದಗಿರಿ ಉಪವಿಭಾಗಾಧಿಕಾರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>