<p><strong>ಯಾದಗಿರಿ:</strong> ನಗರ ಹೊರವಲಯದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ಬಸ್ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. </p>.<p>ಗುರುಮಠಕಲ್ ವಿಭಾಗಕ್ಕೆ ಸೇರಿದ ಗುರುಮಠಕಲ್– ಯಾದಗಿರಿ– ಶಹಾಪುರ– ಮಹಲ್ ರೋಜಾ ನಡುವೆ ಸಂಚರಿಸುವ ಬಸ್ನ ಬಲಬದಿಯ ಟೈರ್ ಬಳಿ ಹೊಗೆ ಕಾಣಿಸಿಕೊಂಡಿತು. ಬಸ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರು ಆತಂಕದಿಂದ ಕೆಳಗಿ ಇಳಿದರು. ಕೆಲವರು ಕಿಟಕಿಯಿಂದಲೂ ಜಿಗಿದರು.</p>.<p>‘ಬಸ್ನಲ್ಲಿ ಬೆಂಕಿಯಿಂದ ಹೊಗೆ ಕಾಣಿಸಿಕೊಂಡಿಲ್ಲ. ಟೈರ್ನ ಲೈನರ್ ಜಾಮ್ ಆಗಿದ್ದರಿಂದ ಬಿಳಿಯಾದ ಹೊಗೆ ಕಾಣಿಸಿಕೊಂಡಿದೆ. ತಾಂತ್ರಿಕ ಸಿಬ್ಬಂದಿಯಿಂದ ಈ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇದೇ ಬಸ್ನಲ್ಲಿ ಈ ಹಿಂದೆಯೂ ಇಂತಹ ಘಟನೆ ನಡೆದಿತ್ತಾ? ನಿಯಮಿತವಾಗಿ ತಪಸಣೆ ಆಗಿದೆ ಎಂಬುದರ ಬಗ್ಗೆ ವರದಿ ಪಡೆಯುತ್ತೇನೆ. ತಪ್ಪು ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ನೋಟಿಸ್ ಕೊಟ್ಟು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿಭಾಗೀಯ ನಿಯಂತ್ರಣ ಅಧಿಕಾರಿ ಜಿ.ಬಿ. ಮಂಜುನಾಥ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರ ಹೊರವಲಯದಲ್ಲಿ ಸೋಮವಾರ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ (ಕೆಕೆಆರ್ಟಿಸಿ) ಬಸ್ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಆತಂಕದ ವಾತಾವರಣ ನಿರ್ಮಾಣವಾಗಿತ್ತು. </p>.<p>ಗುರುಮಠಕಲ್ ವಿಭಾಗಕ್ಕೆ ಸೇರಿದ ಗುರುಮಠಕಲ್– ಯಾದಗಿರಿ– ಶಹಾಪುರ– ಮಹಲ್ ರೋಜಾ ನಡುವೆ ಸಂಚರಿಸುವ ಬಸ್ನ ಬಲಬದಿಯ ಟೈರ್ ಬಳಿ ಹೊಗೆ ಕಾಣಿಸಿಕೊಂಡಿತು. ಬಸ್ನಲ್ಲಿದ್ದ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರು ಆತಂಕದಿಂದ ಕೆಳಗಿ ಇಳಿದರು. ಕೆಲವರು ಕಿಟಕಿಯಿಂದಲೂ ಜಿಗಿದರು.</p>.<p>‘ಬಸ್ನಲ್ಲಿ ಬೆಂಕಿಯಿಂದ ಹೊಗೆ ಕಾಣಿಸಿಕೊಂಡಿಲ್ಲ. ಟೈರ್ನ ಲೈನರ್ ಜಾಮ್ ಆಗಿದ್ದರಿಂದ ಬಿಳಿಯಾದ ಹೊಗೆ ಕಾಣಿಸಿಕೊಂಡಿದೆ. ತಾಂತ್ರಿಕ ಸಿಬ್ಬಂದಿಯಿಂದ ಈ ಬಗ್ಗೆ ಮಾಹಿತಿ ಪಡೆಯಲಾಗಿದೆ. ಇದೇ ಬಸ್ನಲ್ಲಿ ಈ ಹಿಂದೆಯೂ ಇಂತಹ ಘಟನೆ ನಡೆದಿತ್ತಾ? ನಿಯಮಿತವಾಗಿ ತಪಸಣೆ ಆಗಿದೆ ಎಂಬುದರ ಬಗ್ಗೆ ವರದಿ ಪಡೆಯುತ್ತೇನೆ. ತಪ್ಪು ಕಂಡುಬಂದಲ್ಲಿ ಸಂಬಂಧಪಟ್ಟವರಿಗೆ ನೋಟಿಸ್ ಕೊಟ್ಟು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ವಿಭಾಗೀಯ ನಿಯಂತ್ರಣ ಅಧಿಕಾರಿ ಜಿ.ಬಿ. ಮಂಜುನಾಥ ‘ಪ್ರಜಾವಾಣಿ’ಗೆ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>