<p><strong>ಹುಣಸಗಿ:</strong> ‘ಸತ್ವಯುತ ಸಾಹಿತ್ಯವನ್ನು ನಿರಂತರ ಓದುವ ಮೂಲಕ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳುವುದು ಮುಖ್ಯ’ ಎಂದು ಸಾಹಿತಿ ಕನಕಪ್ಪ ವಾಗಣಗೇರಿ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ಬೆನಕನಕಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕುವೆಂಪು ಅವರ ಸಾಹಿತ್ಯವನ್ನು ಓದುತ್ತಾ ಹೋದಂತೆಲ್ಲ ಪ್ರ ತಿಬಾರಿಯೂ ಒಂದೊಂದು ಹೊಸತನ ಆ ಓದಿನಲ್ಲಿ ಕಾಣುವುದಂತೂ ಸತ್ಯ. ಮಕ್ಕಳು ಕೂಡ ಮಕ್ಕಳ ಸಾಹಿತ್ಯವನ್ನು ಓದುವುದನ್ನು ರೂಢಿಸಿಕೊಳ್ಳಬೇಕು’ ಎಂದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಿದ್ಧರಾಮ ಹೊನ್ಕಲ್ ಮಾತನಾಡಿ ಚಕೋರ ಕಾರ್ಯಕ್ರಮದ ಆಶಯ ನುಡಿ ವ್ಯಕ್ತಪಡಿಸಿ, ನಾಡಿನ ಸಾಹಿತಿಗಳ ಕುರಿತು ಮಾತನಾಡಿದರು.</p>.<p>ಕಸಾಪ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಮಾತನಾಡಿ, ‘ಚಕೋರ ಕಾರ್ಯಕ್ರಮದ ಮೂಲಕ ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನಲ್ಲಿ ಮನೆ ಬಾಗಿಲಿಗೆ ಸಾಹಿತ್ಯ ಸಂಸ್ಕೃತಿಯ ಪರಿಚಯ ಮಾಡುತ್ತಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸಂಗಮ್ಮ ನಾಗಾವಿ ವಹಿಸಿದ್ದರು.</p>.<p>ಸಾಹಿತಿ ನಾಗನಗೌಡ ಪಾಟೀಲ, ಶಾಲೆ.ಯ ಎಸ್ಡಿಎಂಸಿ ಅಧ್ಯಕ್ಷ ಅಮೃತ ಅರಳಗುಂಡಗಿ, ಉಪಾಧ್ಯಕ್ಷ ಶಿವಾಜಿ ಗುಂತಾ, ನಿವೃತ್ತ ಶಿಕ್ಷಕ ಬಸವರಾಜ ಕೋಳಕೂರ, ಚಂದ್ರಕಾಂತ ಕುಲಕರ್ಣಿ, ಹಣಮಂತ್, ಮಾನಪ್ಪ ಚಿಕ್ಕ ಹೆಬ್ಬಾಳ, ತಿರುಪತಿ ದೊರೆ ಇದ್ದರು.</p>.<p>ಸಣ್ಣೆಕ್ಕೆಪ್ಪ ಪೂಜಾರಿ ಸ್ವಾಗತಿಸಿದರು. ಸಾಹೇಬಗೌಡ ಬಿರಾದಾರ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ:</strong> ‘ಸತ್ವಯುತ ಸಾಹಿತ್ಯವನ್ನು ನಿರಂತರ ಓದುವ ಮೂಲಕ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಳ್ಳುವುದು ಮುಖ್ಯ’ ಎಂದು ಸಾಹಿತಿ ಕನಕಪ್ಪ ವಾಗಣಗೇರಿ ಹೇಳಿದರು.</p>.<p>ಹುಣಸಗಿ ತಾಲ್ಲೂಕಿನ ಬೆನಕನಕಹಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪು ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಕುವೆಂಪು ಅವರ ಸಾಹಿತ್ಯವನ್ನು ಓದುತ್ತಾ ಹೋದಂತೆಲ್ಲ ಪ್ರ ತಿಬಾರಿಯೂ ಒಂದೊಂದು ಹೊಸತನ ಆ ಓದಿನಲ್ಲಿ ಕಾಣುವುದಂತೂ ಸತ್ಯ. ಮಕ್ಕಳು ಕೂಡ ಮಕ್ಕಳ ಸಾಹಿತ್ಯವನ್ನು ಓದುವುದನ್ನು ರೂಢಿಸಿಕೊಳ್ಳಬೇಕು’ ಎಂದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯ ಸಿದ್ಧರಾಮ ಹೊನ್ಕಲ್ ಮಾತನಾಡಿ ಚಕೋರ ಕಾರ್ಯಕ್ರಮದ ಆಶಯ ನುಡಿ ವ್ಯಕ್ತಪಡಿಸಿ, ನಾಡಿನ ಸಾಹಿತಿಗಳ ಕುರಿತು ಮಾತನಾಡಿದರು.</p>.<p>ಕಸಾಪ ಅಧ್ಯಕ್ಷ ವೆಂಕಟಗಿರಿ ದೇಶಪಾಂಡೆ ಮಾತನಾಡಿ, ‘ಚಕೋರ ಕಾರ್ಯಕ್ರಮದ ಮೂಲಕ ಕರ್ನಾಟಕ ಸಾಹಿತ್ಯ ಅಕಾಡೆಮಿ ನಾಡಿನಲ್ಲಿ ಮನೆ ಬಾಗಿಲಿಗೆ ಸಾಹಿತ್ಯ ಸಂಸ್ಕೃತಿಯ ಪರಿಚಯ ಮಾಡುತ್ತಿದೆ’ ಎಂದರು.</p>.<p>ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಸಂಗಮ್ಮ ನಾಗಾವಿ ವಹಿಸಿದ್ದರು.</p>.<p>ಸಾಹಿತಿ ನಾಗನಗೌಡ ಪಾಟೀಲ, ಶಾಲೆ.ಯ ಎಸ್ಡಿಎಂಸಿ ಅಧ್ಯಕ್ಷ ಅಮೃತ ಅರಳಗುಂಡಗಿ, ಉಪಾಧ್ಯಕ್ಷ ಶಿವಾಜಿ ಗುಂತಾ, ನಿವೃತ್ತ ಶಿಕ್ಷಕ ಬಸವರಾಜ ಕೋಳಕೂರ, ಚಂದ್ರಕಾಂತ ಕುಲಕರ್ಣಿ, ಹಣಮಂತ್, ಮಾನಪ್ಪ ಚಿಕ್ಕ ಹೆಬ್ಬಾಳ, ತಿರುಪತಿ ದೊರೆ ಇದ್ದರು.</p>.<p>ಸಣ್ಣೆಕ್ಕೆಪ್ಪ ಪೂಜಾರಿ ಸ್ವಾಗತಿಸಿದರು. ಸಾಹೇಬಗೌಡ ಬಿರಾದಾರ ನಿರೂಪಿಸಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>