ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳ್ಳೂರು (ಎಂ) ಸೇತುವೆ ಮುಳುಗಡೆ, ಜಮೀನು ಜಲಾವೃತ

ನಾರಾಯಣಪುರ ಜಲಾಶಯದಿಂದ 2.90 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ
Last Updated 5 ಆಗಸ್ಟ್ 2019, 15:34 IST
ಅಕ್ಷರ ಗಾತ್ರ

ಯಾದಗಿರಿ: ನಾರಾಯಣಪುರ ಜಲಾಶಯದಿಂದ 2.90 ಲಕ್ಷ ಕ್ಯುಸೆಕ್ ನೀರು ಹೊರ ಬಿಟ್ಟಿರುವುದರಿಂದ ಕೊಳ್ಳೂರು (ಎಂ) ಸೇತುವೆ ಮುಳುಗಡೆಯಾಗಿದೆ.

ಇದರಿಂದ ಕಲಬುರ್ಗಿ, ಯಾದಗಿರಿ, ರಾಯಚೂರು ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದ ವಾಹನಗಳುತಿಂಥಿಣಿ ಸೇತುವೆ ಮೂಲಕ 45 ಕಿ.ಮೀ. ಹೆಚ್ಚುವರಿ ದೂರ ಕ್ರಮಿಸಬೇಕಾಗಿದೆ.

ಕೃಷ್ಣಾ ನದಿ ದಡದಲ್ಲಿರುವ ಹುಣಸಗಿ ತಾಲ್ಲೂಕಿನ ಛಾಯಾಭಗವತಿ ದೇವಸ್ಥಾನ ಭಾಗಶಃ ಮುಳುಗ‌ಡೆಯಾಗಿದೆ.ಜಮೀನುಗಳಿಗೆ ನೀರು ನುಗ್ಗಿದ್ದರಿಂದ ಸಾವಿರಾರು ಎಕರೆಯಲ್ಲಿ ಭತ್ತ, ಹತ್ತಿ, ತೊಗರಿ ಬೆಳೆಗೆ ಹಾನಿಯಾಗುವ ಸಾಧ್ಯತೆ ಇದೆ. ಕೆಲವೆಡೆ ಬೆಳೆ ನೀರಿನಲ್ಲಿ ಕೊಚ್ಚಿ ಹೋಗಿದೆ.

ಗಂಜಿ ಕೇಂದ್ರ ಸ್ಥಾಪನೆ: ಸುರಪುರ ತಾಲ್ಲೂಕಿನ ದೇವಾಪುರ, ತಿಂಥಿಣಿ, ಸುರಪುರ ಎಪಿಎಂಸಿ ಬಳಿ ಗಂಜಿ ಕೇಂದ್ರ ಸ್ಥಾಪಿಸಲಾಗಿದೆ. ಶಹಾಪುರ ತಾಲ್ಲೂಕಿನ ಕೊಳ್ಳೂರ(ಎಂ), ಗೌಡೂರ ಹಾಗೂ ವಡಗೇರಾ ತಾಲ್ಲೂಕಿನ ಹಯ್ಯಾಳ, ವಡಗೇರಾ, ಬೆಂಡಬೆಂಬಳಿ ಗ್ರಾಮದಲ್ಲಿ ಗಂಜಿ ಕೇಂದ್ರ ಆರಂಭಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT