ಕಂದಕೂರ ಜಾತ್ರೆ ರದ್ದಾಗಿದ್ದರಿಂದ ಅಲ್ಲಿಗೆ ಬಂದಿದ್ದ ಭಕ್ತರು ಚಿಂತನಹಳ್ಳಿ ಗವಿಸಿದ್ಧೇಲಿಂಗೇಶ್ವರ ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಕಾರು, ಬೈಕ್, ಆಟೊಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬಂದಿದ್ದರು. ಇಲ್ಲಿ ಪೊಲೀಸರನ್ನು ನಿಯೋಜಿಸಿರಲಿಲ್ಲ. ಹೀಗಾಗಿ ಯಾವುದೇ ನಿಯಮಗಳು ಪಾಲನೆಯಾಗಲಿಲ್ಲ. ಜನರು ಗುಂಪು ಗುಂಪಾಗಿ ತೆರಳುವ ದೃಶ್ಯ ಸಾಮಾನ್ಯವಾಗಿತ್ತು.