<p><strong>ಯಾದಗಿರಿ:</strong> ನಗರದ ಡಾನ್ ಬಾಸ್ಕೊ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ನಿಯೋಜನೆಗೊಂಡಿದ್ದ 45 ವರ್ಷದ ಶಿಕ್ಷಕರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.</p>.<p>ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಕೆಲ ದಿನಗಳ ಹಿಂದೆ ಅವರು ಗಂಟಲು ದ್ರವ ಮಾದರಿ ನೀಡಿದ್ದರು. ವಾರ ಕಳೆದರೂ ವರದಿ ಬಾರದ ಕಾರಣ ಮೌಲ್ಯಮಾಪನಕ್ಕೆ ಹಾಜರಾಗಿದ್ದರು. ಶುಕ್ರವಾರ ಅವರಿಗೆ ಕರೆ ಬಂದಾಗ ಕೋವಿಡ್ ದೃಢಪಟ್ಟಿರುವುದು ತಿಳಿದು ಬಂದಿದೆ. ಆದರೆ, ಅವರ ಪತ್ನಿ, ಮಕ್ಕಳಿಗೆ ನೆಗೆಟಿವ್ ಬಂದಿದೆ.</p>.<p>ವಿಷಯ ತಿಳಿದ ಡಿಡಿಪಿಐ ಶ್ರೀನಿವಾಸರೆಡ್ಡಿ ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡಿ ಶಿಕ್ಷಕರಿಗೆ ಧೈರ್ಯ ತುಂಬಿದ್ದಾರೆ.</p>.<p>‘ಹಿಂದಿ ಶಿಕ್ಷಕರು ಮೌಲ್ಯಮಾಪನ ಮಾಡುವ ಕೋಣೆಯಲ್ಲಿ 12 ರಿಂದ 14 ಶಿಕ್ಷಕರು ಇದ್ದಾರೆ. ಅವರಲ್ಲಿ ಇಬ್ಬರು ಮಾತ್ರ ಹೆಚ್ಚಿನ ಸಂಪರ್ಕಕ್ಕೆ ಬಂದಿದ್ದಾರೆ. ಆದರೂ ಎಲ್ಲ ಶಿಕ್ಷಕರಿಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸಿದ್ದೇನೆ. ಈಗ ಅವರೆಲ್ಲರೂಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ’ ಎಂದು ಡಿಡಿಪಿಐ ಶ್ರೀನಿವಾಸರೆಡ್ಡಿ ತಿಳಿಸಿದರು.</p>.<p>‘ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿಯವರು ಬುಧವಾರ ಡಾನ್ ಬಾಸ್ಕೊ ಶಾಲೆಗೆ ಭೇಟಿ ನೀಡಿದರು. ಆದರೆ, ಶಿಕ್ಷಕರನ್ನು ಭೇಟಿ ಮಾಡಿಲ್ಲ. ಹಿಂದಿ ಮೌಲ್ಯಮಾಪನ ಮುಗಿದಿದೆ.ಪಾಸಿಟಿವ್ ಬಂದ ಶಿಕ್ಷಕರು ಊರಿಗೆ ತೆರಳಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ನಾನು ಇಲ್ಲಿ ಆರಾಮಾಗಿದ್ದೇನೆ. ಯಾವುದೇ ಲಕ್ಷಣಗಳು ಇಲ್ಲ. ಸಮಯಕ್ಕೆ ಸರಿಯಾಗಿ ಊಟ, ಉಪಾಹಾರ ನೀಡುತ್ತಿದ್ದಾರೆ. ಮನೆಯವರಿಗೆ ನೆಗೆಟಿವ್ ಬಂದಿದೆ. ಮನೆಯಲ್ಲಿ ಮಕ್ಕಳು ಇರುವುದರಿಂದ ಯಾದಗಿರಿಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ. ಸೋಂಕು ಎಲ್ಲಿಂದ ಬಂತು ತಗುಲಿತು ಎಂದು ತಿಳಿಯದಾಗಿದೆ. ಕೆಲ ದಿನಗಳ ಮಟ್ಟಿಗೆ ಇಲ್ಲಿಯೇ ಇರಲು ಸೂಚಿಸಿದ್ದಾರೆ’ ಎಂದು ದೂರವಾಣಿ ಮೂಲಕ ಶಿಕ್ಷಕರು ಮಾಹಿತಿ ನೀಡಿದರು.</p>.<p>ನಗರದಡಾನ್ ಬಾಸ್ಕೊ, ಆರ್ವಿ ಶಾಲೆ, ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ನಗರದ ಡಾನ್ ಬಾಸ್ಕೊ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನಕ್ಕೆ ನಿಯೋಜನೆಗೊಂಡಿದ್ದ 45 ವರ್ಷದ ಶಿಕ್ಷಕರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.</p>.<p>ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಕೆಲ ದಿನಗಳ ಹಿಂದೆ ಅವರು ಗಂಟಲು ದ್ರವ ಮಾದರಿ ನೀಡಿದ್ದರು. ವಾರ ಕಳೆದರೂ ವರದಿ ಬಾರದ ಕಾರಣ ಮೌಲ್ಯಮಾಪನಕ್ಕೆ ಹಾಜರಾಗಿದ್ದರು. ಶುಕ್ರವಾರ ಅವರಿಗೆ ಕರೆ ಬಂದಾಗ ಕೋವಿಡ್ ದೃಢಪಟ್ಟಿರುವುದು ತಿಳಿದು ಬಂದಿದೆ. ಆದರೆ, ಅವರ ಪತ್ನಿ, ಮಕ್ಕಳಿಗೆ ನೆಗೆಟಿವ್ ಬಂದಿದೆ.</p>.<p>ವಿಷಯ ತಿಳಿದ ಡಿಡಿಪಿಐ ಶ್ರೀನಿವಾಸರೆಡ್ಡಿ ಮೌಲ್ಯಮಾಪನ ಕೇಂದ್ರಕ್ಕೆ ಭೇಟಿ ನೀಡಿ ಶಿಕ್ಷಕರಿಗೆ ಧೈರ್ಯ ತುಂಬಿದ್ದಾರೆ.</p>.<p>‘ಹಿಂದಿ ಶಿಕ್ಷಕರು ಮೌಲ್ಯಮಾಪನ ಮಾಡುವ ಕೋಣೆಯಲ್ಲಿ 12 ರಿಂದ 14 ಶಿಕ್ಷಕರು ಇದ್ದಾರೆ. ಅವರಲ್ಲಿ ಇಬ್ಬರು ಮಾತ್ರ ಹೆಚ್ಚಿನ ಸಂಪರ್ಕಕ್ಕೆ ಬಂದಿದ್ದಾರೆ. ಆದರೂ ಎಲ್ಲ ಶಿಕ್ಷಕರಿಗೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ತಿಳಿಸಿದ್ದೇನೆ. ಈಗ ಅವರೆಲ್ಲರೂಹೋಂ ಕ್ವಾರಂಟೈನ್ನಲ್ಲಿ ಇದ್ದಾರೆ’ ಎಂದು ಡಿಡಿಪಿಐ ಶ್ರೀನಿವಾಸರೆಡ್ಡಿ ತಿಳಿಸಿದರು.</p>.<p>‘ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿಯವರು ಬುಧವಾರ ಡಾನ್ ಬಾಸ್ಕೊ ಶಾಲೆಗೆ ಭೇಟಿ ನೀಡಿದರು. ಆದರೆ, ಶಿಕ್ಷಕರನ್ನು ಭೇಟಿ ಮಾಡಿಲ್ಲ. ಹಿಂದಿ ಮೌಲ್ಯಮಾಪನ ಮುಗಿದಿದೆ.ಪಾಸಿಟಿವ್ ಬಂದ ಶಿಕ್ಷಕರು ಊರಿಗೆ ತೆರಳಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ನಾನು ಇಲ್ಲಿ ಆರಾಮಾಗಿದ್ದೇನೆ. ಯಾವುದೇ ಲಕ್ಷಣಗಳು ಇಲ್ಲ. ಸಮಯಕ್ಕೆ ಸರಿಯಾಗಿ ಊಟ, ಉಪಾಹಾರ ನೀಡುತ್ತಿದ್ದಾರೆ. ಮನೆಯವರಿಗೆ ನೆಗೆಟಿವ್ ಬಂದಿದೆ. ಮನೆಯಲ್ಲಿ ಮಕ್ಕಳು ಇರುವುದರಿಂದ ಯಾದಗಿರಿಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇನೆ. ಸೋಂಕು ಎಲ್ಲಿಂದ ಬಂತು ತಗುಲಿತು ಎಂದು ತಿಳಿಯದಾಗಿದೆ. ಕೆಲ ದಿನಗಳ ಮಟ್ಟಿಗೆ ಇಲ್ಲಿಯೇ ಇರಲು ಸೂಚಿಸಿದ್ದಾರೆ’ ಎಂದು ದೂರವಾಣಿ ಮೂಲಕ ಶಿಕ್ಷಕರು ಮಾಹಿತಿ ನೀಡಿದರು.</p>.<p>ನಗರದಡಾನ್ ಬಾಸ್ಕೊ, ಆರ್ವಿ ಶಾಲೆ, ಸರ್ಕಾರಿ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>