ಶಹಾಪುರ: ‘ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 126ಕ್ಕೆ ಜಿಗಿತವಾಗಿದೆ. ಇಡೀ ಜಿಲ್ಲೆಯ ಜನ ಭೀತಿ ಹಾಗೂ ಆತಂಕಕ್ಕೆ ಒಳಗಾಗಿದ್ದಾರೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಜಿಲ್ಲೆಗೆ ಆರೋಗ್ಯ ಸಚಿವರಾಗಲೀ, ಜಿಲ್ಲಾ ಉಸ್ತುವಾರಿ ಸಚಿವರಾಗಲೀ, ವೈದ್ಯಕೀಯ ಸಚಿವರು, ಸಂಸದರು, ಶಾಸಕರು ಭೇಟಿ ನೀಡದೆ ನಿಷ್ಕಾಳಜಿ ತೋರಿಸಿದ್ದಾರೆ’ ಎಂದು ಕರ್ನಾಟಕ ಕೃಷಿಕೂಲಿಕಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದಾವಲಸಾಬ್ ನದಾಫ್ ಬೇಸರ ವ್ಯಕ್ತಪಡಿಸಿದ್ದಾರೆ.