ಕಳೆದ ವರ್ಷ ಇದೇ ತಿಂಗಳಲ್ಲಿ ನದಿಗೆ ಅಧಿಕ ಪ್ರಮಾಣ ನೀರು ಬಿಡುಗಡೆಯಿಂದ ನದಿ ದಂಡೆಯ ಗ್ರಾಮಸ್ಥರು ಸಾಕಷ್ಟು ತೊಂದರೆ ಅನುಭವಿಸಿ ನಿರಾಶ್ರಿತ ಕೇಂದ್ರದಲ್ಲಿ ನೆಲೆ ಕಂಡಿದ್ದರು. ಈ ಬಾರಿ ಅಷ್ಟೊಂದು ಸಮಸ್ಯೆಯಾಗಲಿಲ್ಲ. ಆದರೆ, ತಗ್ಗು ಪ್ರದೇಶದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಅದರಲ್ಲಿ ಹತ್ತಿ ಬೆಳೆ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಕೊಳ್ಳೂರ ಗ್ರಾಮದ ರೈತ ಮುಖಂಡ ಲಕ್ಷ್ಮಿಕಾಂತ ನಾಯಕ ತಿಳಿಸಿದರು.