<p><strong>ಹುಣಸಗಿ (ಯಾದಗಿರಿ): </strong>ತಾಲ್ಲೂಕಿನ ನಾರಾಯಣಪುರದ ಬಸವಸಾಗರದಿಂದ ಭೋರ್ಗರೆದು ಹರಿದು ರುದ್ರ ನರ್ತನ ತೋರಿಸಿದ್ದ ಕೃಷ್ಣೆ ಶಾಂತಳಾಗುತಿದ್ದು, ಪ್ರವಾಹ ಪರಿಸ್ಥಿತಿ ಹತೋಟಿಗೆ ಬರುತ್ತಿದೆ.</p>.<p>ಕಳೆದ 15 ದಿನಗಳಿಂದಲೂ ಅಬ್ಬರಿಸುತ್ತಲೇ ನದಿ ತೀರದಲ್ಲಿರುವ ಗ್ರಾಮಗಳ ಹೊಲಗಳಿಗೆ ನುಗ್ಗಿದ ಕೃಷ್ಣೆ ಸದ್ಯ ಶಾಂತ ರೀತಿಯಲ್ಲಿಯೇ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ತೀರದಲ್ಲಿರುವ ಗ್ರಾಮಗಳ ಜನರಿಗೆ ಆತಂಕ, ದುಗುಡ ಕೊಂಚ ದೂರವಾಗಿದೆ.</p>.<p>ಶುಕ್ರವಾರ 2.60 ಲಕ್ಷ ಕ್ಯುಸೆಕ್ ಇದ್ದ ಹೊರ ಹರಿವು ಶನಿವಾರ 1.65 ಲಕ್ಷ ಕ್ಯುಸೆಕ್ಗೆ ಇಳಿದಿತ್ತು. ಭಾನುವಾರವೂ ಇದೇ ಹರಿವು ದಾಖಲಾಗಿತ್ತು. ಆದರೆ, ಸೋಮವಾರ ಬೆಳಿಗ್ಗೆ ನದಿಗೆ 78 ಸಾವಿರ ಕ್ಯುಸೆಕ್ ಮಾತ್ರ ಹರಿಸಲಾಗುತ್ತಿದೆ ಎಂದು ಜಲಾಶಯದ ಮೂಲಗಳಿಂದ ತಿಳಿದು ಬಂದಿದೆ.</p>.<p>ಸೋಮವಾರ ಸಂಜೆ 1 ಲಕ್ಷ ಕ್ಯುಸೆಕ್ ಒಳ ಹರಿವು ಇದ್ದು, ಜಲಾಶಯದ ಮಟ್ಟ 491.33 ಮೀಟರ್ ಕಾಯ್ದುಕೊಂಡು 6 ಮುಖ್ಯ ಕ್ರಸ್ಟ್ ಗೇಟ್ಗಳ ಮುಖಾಂತರ 69 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಅಲ್ಲದೇ ಎಡದಂಡೆ ಮುಖ್ಯ ಕಾಲುವೆಗೆ 6 ಸಾವಿರ ಕ್ಯುಸೆಕ್ ಹರಿಸಲಾಗುತ್ತಿದೆ ಎಂದು ಜಲಾಶಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದರು.</p>.<p>ಕಳೆದ ಒಂದು ವಾರದಿಂದಲೂ ಹುಣಸಗಿ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಹಾಗೂ ಜಿಟಿ ಜಿಟಿ ಮಳೆಯಿಂದ ಕೂಡಿದ ವಾತಾವರಣ ಇತ್ತು. ಆದರೆ ಸೋಮವಾರ ಸಂಪೂರ್ಣ ಬಿಸಿಲು ಬಿದ್ದಿದ್ದರಿಂದ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.</p>.<p>ಭಾನುವಾರ ರಾತ್ರಿ ಕೊಡೇಕಲ್ಲ ಗ್ರಾಮದಲ್ಲಿ ಅಲ್ಪ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ (ಯಾದಗಿರಿ): </strong>ತಾಲ್ಲೂಕಿನ ನಾರಾಯಣಪುರದ ಬಸವಸಾಗರದಿಂದ ಭೋರ್ಗರೆದು ಹರಿದು ರುದ್ರ ನರ್ತನ ತೋರಿಸಿದ್ದ ಕೃಷ್ಣೆ ಶಾಂತಳಾಗುತಿದ್ದು, ಪ್ರವಾಹ ಪರಿಸ್ಥಿತಿ ಹತೋಟಿಗೆ ಬರುತ್ತಿದೆ.</p>.<p>ಕಳೆದ 15 ದಿನಗಳಿಂದಲೂ ಅಬ್ಬರಿಸುತ್ತಲೇ ನದಿ ತೀರದಲ್ಲಿರುವ ಗ್ರಾಮಗಳ ಹೊಲಗಳಿಗೆ ನುಗ್ಗಿದ ಕೃಷ್ಣೆ ಸದ್ಯ ಶಾಂತ ರೀತಿಯಲ್ಲಿಯೇ ಹರಿಯುತ್ತಿದ್ದಾಳೆ. ಇದರಿಂದಾಗಿ ನದಿ ತೀರದಲ್ಲಿರುವ ಗ್ರಾಮಗಳ ಜನರಿಗೆ ಆತಂಕ, ದುಗುಡ ಕೊಂಚ ದೂರವಾಗಿದೆ.</p>.<p>ಶುಕ್ರವಾರ 2.60 ಲಕ್ಷ ಕ್ಯುಸೆಕ್ ಇದ್ದ ಹೊರ ಹರಿವು ಶನಿವಾರ 1.65 ಲಕ್ಷ ಕ್ಯುಸೆಕ್ಗೆ ಇಳಿದಿತ್ತು. ಭಾನುವಾರವೂ ಇದೇ ಹರಿವು ದಾಖಲಾಗಿತ್ತು. ಆದರೆ, ಸೋಮವಾರ ಬೆಳಿಗ್ಗೆ ನದಿಗೆ 78 ಸಾವಿರ ಕ್ಯುಸೆಕ್ ಮಾತ್ರ ಹರಿಸಲಾಗುತ್ತಿದೆ ಎಂದು ಜಲಾಶಯದ ಮೂಲಗಳಿಂದ ತಿಳಿದು ಬಂದಿದೆ.</p>.<p>ಸೋಮವಾರ ಸಂಜೆ 1 ಲಕ್ಷ ಕ್ಯುಸೆಕ್ ಒಳ ಹರಿವು ಇದ್ದು, ಜಲಾಶಯದ ಮಟ್ಟ 491.33 ಮೀಟರ್ ಕಾಯ್ದುಕೊಂಡು 6 ಮುಖ್ಯ ಕ್ರಸ್ಟ್ ಗೇಟ್ಗಳ ಮುಖಾಂತರ 69 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಸಲಾಗುತ್ತಿದೆ. ಅಲ್ಲದೇ ಎಡದಂಡೆ ಮುಖ್ಯ ಕಾಲುವೆಗೆ 6 ಸಾವಿರ ಕ್ಯುಸೆಕ್ ಹರಿಸಲಾಗುತ್ತಿದೆ ಎಂದು ಜಲಾಶಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಶಂಕರ ನಾಯ್ಕೋಡಿ ತಿಳಿಸಿದರು.</p>.<p>ಕಳೆದ ಒಂದು ವಾರದಿಂದಲೂ ಹುಣಸಗಿ ಸುತ್ತಮುತ್ತಲ ಪ್ರದೇಶದಲ್ಲಿ ಮೋಡ ಹಾಗೂ ಜಿಟಿ ಜಿಟಿ ಮಳೆಯಿಂದ ಕೂಡಿದ ವಾತಾವರಣ ಇತ್ತು. ಆದರೆ ಸೋಮವಾರ ಸಂಪೂರ್ಣ ಬಿಸಿಲು ಬಿದ್ದಿದ್ದರಿಂದ ರೈತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದರು.</p>.<p>ಭಾನುವಾರ ರಾತ್ರಿ ಕೊಡೇಕಲ್ಲ ಗ್ರಾಮದಲ್ಲಿ ಅಲ್ಪ ಮಳೆಯಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>