ಕೃಷ್ಣಾ ನದಿ ನೀರಿನ ಹಂಚಿಕೆ ಕುರಿತು ನೂತನ ನ್ಯಾಯಮಂಡಳಿ ನೇಮಿಸಬೇಕೆಂದು ತೆಲಂಗಾಣ ರಾಜ್ಯ ಸರ್ಕಾರದ ಬೇಡಿಕೆಯಲ್ಲಿ ರಾಜಕೀಯ ಸ್ವಾರ್ಥ ಅಡಗಿದೆ. 2013ರಲ್ಲಿನ ಐತೀರ್ಪಿನಲ್ಲಿ ಸ್ಪಷ್ಟವಾಗಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕಕ್ಕೆ ನೀರು ಹಂಚಿಕೆ ತಿಳಿಸಿರುವಾಗ ಅನವಶ್ಯಕವಾಗಿ ಗೊಂದಲ ಸೃಷ್ಟಿ ಮಾಡುವ ಬದಲು ಐತೀರ್ಪಿನಂತೆ ಸರ್ಕಾರ ಅಧಿಸೂಚನೆ ಹೊರಡಿಸಬೇಕು ಎಂದು ಅವರು ಹೇಳಿದ್ದಾರೆ.