<p><strong>ಸುರಪುರ</strong>: ‘ಕಳೆದ ಅವಧಿಯ ನಮ್ಮ ಆಡಳಿತದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ₹ 1000 ಕೋಟಿ, ಆ ಪೈಕಿ ಸುರಪುರ ತಾಲ್ಲೂಕಿಗೆ ₹ 120 ಕೋಟಿ ಸಾಲ ವಿತರಣೆ ಮಾಡಲಾಗಿದೆ’ ಎಂದು ಕೆವೈಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕ ಸುರೇಶ ಸಜ್ಜನ ತಿಳಿಸಿದರು.</p>.<p>ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ನಾವು ಅಧಿಕಾರದ ಚುಕ್ಕಾಣಿಯಿಡಿದಾಗ ಕೆವೈಡಿಸಿಸಿ ಬ್ಯಾಂಕ್ ₹ 58 ಕೋಟಿ ರೂಪಾಯಿ ನಷ್ಟದಲ್ಲಿತ್ತು. ಮೂರು ವರ್ಷಗಳಿಂದ ರೈತರಿಗೆ ಯಾವ ಸಾಲ, ಸೌಲಭ್ಯ ಕೊಟ್ಟಿರಲಿಲ್ಲ. ಅಪೆಕ್ಸ್ ಮತ್ತು ನಬಾರ್ಡ್ ಬ್ಯಾಂಕ್ಗೆ ದುಡ್ಡು ಕಟ್ಟಬೇಕಾಗಿತ್ತು. ಇಂತಹ ಸಂದಿಗ್ಧ ಪರಿಸ್ಥಿಯಲ್ಲಿ ಬ್ಯಾಂಕ್ನ್ನು ಉತ್ತಮ ಹಳಿಗೆ ತಂದ ತೃಪ್ತಿ ಇದೆ’ ಎಂದರು.</p>.<p>‘ಈ ಬಾರಿಯ ನಿರ್ದೇಶಕ ಮಂಡಳಿ ಚುನಾವಣೆ ಭಾರಿ ಪೈಪೋಟಿಯಿಂದ ಕೂಡಿತ್ತು. ಈ ಬಾರಿ 104 ಮತಗಳಲ್ಲಿ 89 ಮತಗಳು ನನಗೆ ಬಂದು ನಾನು ಜಯಶೀಲನಾದೆ. ದೊಡ್ಡ ಬಹುಮತದಿಂದ ನನಗೆ ಚುನಾಯಿಸಿದರು. ಯಾದಗಿಯಲ್ಲಿ ಡಿಸಿಸಿ ಬ್ಯಾಂಕ್ ಆರಂಭಿಸುವ ಕನಸು ಹೊತ್ತಿದ್ದೇನೆ’ ಎಂದರು.</p>.<p>ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ.ಪಾಟೀಲ, ಉಪಾಧ್ಯಕ್ಷ ವಿರೇಂದ್ರ ನಿಷ್ಠಿ ದೇಶಮುಖ, ಆಡಳಿತ ಮಂಡಳಿ ನಿರ್ದೇಶಕರು, ಪ್ರಮುಖರಾದ ಬಸವರಾಜ ಜಮದ್ರಖಾನಿ ಸೇರಿ ಶೇರುದಾರರು, ಸಮಾಜ ಬಾಂಧವರು, ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ಕಳೆದ ಅವಧಿಯ ನಮ್ಮ ಆಡಳಿತದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಎಲ್ಲಾ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ₹ 1000 ಕೋಟಿ, ಆ ಪೈಕಿ ಸುರಪುರ ತಾಲ್ಲೂಕಿಗೆ ₹ 120 ಕೋಟಿ ಸಾಲ ವಿತರಣೆ ಮಾಡಲಾಗಿದೆ’ ಎಂದು ಕೆವೈಡಿಸಿಸಿ ಬ್ಯಾಂಕ್ ನೂತನ ನಿರ್ದೇಶಕ ಸುರೇಶ ಸಜ್ಜನ ತಿಳಿಸಿದರು.</p>.<p>ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ನಾವು ಅಧಿಕಾರದ ಚುಕ್ಕಾಣಿಯಿಡಿದಾಗ ಕೆವೈಡಿಸಿಸಿ ಬ್ಯಾಂಕ್ ₹ 58 ಕೋಟಿ ರೂಪಾಯಿ ನಷ್ಟದಲ್ಲಿತ್ತು. ಮೂರು ವರ್ಷಗಳಿಂದ ರೈತರಿಗೆ ಯಾವ ಸಾಲ, ಸೌಲಭ್ಯ ಕೊಟ್ಟಿರಲಿಲ್ಲ. ಅಪೆಕ್ಸ್ ಮತ್ತು ನಬಾರ್ಡ್ ಬ್ಯಾಂಕ್ಗೆ ದುಡ್ಡು ಕಟ್ಟಬೇಕಾಗಿತ್ತು. ಇಂತಹ ಸಂದಿಗ್ಧ ಪರಿಸ್ಥಿಯಲ್ಲಿ ಬ್ಯಾಂಕ್ನ್ನು ಉತ್ತಮ ಹಳಿಗೆ ತಂದ ತೃಪ್ತಿ ಇದೆ’ ಎಂದರು.</p>.<p>‘ಈ ಬಾರಿಯ ನಿರ್ದೇಶಕ ಮಂಡಳಿ ಚುನಾವಣೆ ಭಾರಿ ಪೈಪೋಟಿಯಿಂದ ಕೂಡಿತ್ತು. ಈ ಬಾರಿ 104 ಮತಗಳಲ್ಲಿ 89 ಮತಗಳು ನನಗೆ ಬಂದು ನಾನು ಜಯಶೀಲನಾದೆ. ದೊಡ್ಡ ಬಹುಮತದಿಂದ ನನಗೆ ಚುನಾಯಿಸಿದರು. ಯಾದಗಿಯಲ್ಲಿ ಡಿಸಿಸಿ ಬ್ಯಾಂಕ್ ಆರಂಭಿಸುವ ಕನಸು ಹೊತ್ತಿದ್ದೇನೆ’ ಎಂದರು.</p>.<p>ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಸಿ.ಪಾಟೀಲ, ಉಪಾಧ್ಯಕ್ಷ ವಿರೇಂದ್ರ ನಿಷ್ಠಿ ದೇಶಮುಖ, ಆಡಳಿತ ಮಂಡಳಿ ನಿರ್ದೇಶಕರು, ಪ್ರಮುಖರಾದ ಬಸವರಾಜ ಜಮದ್ರಖಾನಿ ಸೇರಿ ಶೇರುದಾರರು, ಸಮಾಜ ಬಾಂಧವರು, ಅಭಿಮಾನಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>