<p><strong>ಯಾದಗಿರಿ:</strong> ‘ಕಾರ್ಮಿಕ ಇಲಾಖೆಯ ಯಾವುದೇ ಸೌಲಭ್ಯಗಳನ್ನು ಪಡೆಯಬೇಕಾದರೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕ ಕಾರ್ಡ್ ನೋಂದಣಿ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ನಗರದ ಶಾಸಕರ ಕಚೇರಿಯಲ್ಲಿ ಸೋಮವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರಿಗಾಗಿ ಸರ್ಕಾರದ ಜಾರಿಗೆ ತಂದಿರುವ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೋಂದಣಿ ಮಾಡಿಕೊಳ್ಳುವುದು ಅಗತ್ಯ. ಇದರಿಂದ ಎಲ್ಲ ಬಗೆಯ ಯೋಜನೆಗಳನ್ನು ನೇರವಾಗಿ ಪಡೆಯಲು ಅನುಕೂಲ ಆಗಲಿದೆ’ ಎಂದರು.</p>.<p>‘ಜೀವಕ್ಕಿಂತ ದೊಡ್ಡ ವಸ್ತು ಬೇರೊಂದು ಇಲ್ಲ. ಕಾರ್ಮಿಕರು ಕೆಲಸದ ವೇಳೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಸುರಕ್ಷಿತಾ ಕಿಟ್ಗಳನ್ನು ಸದ್ಬಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಮಿಕರೊಬ್ಬರು ತಮಗೆ ಇಲಾಖೆಯಿಂದ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಶಾಸಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಕಾರ್ಮಿಕರ ಅರ್ಜಿಯನ್ನು ಪರಿಗಣಿಸಿ, ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.</p>.<p>ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರ್ ಮಾತನಾಡಿ, ‘ಸುರಕ್ಷಿತಾ ಕಿಟ್ನಲ್ಲಿ ಹೆಲ್ಮೆಟ್, ಗ್ಲೌಸ್, ಶೂ, ಸಾಕ್ಸ್, ಕನ್ನಡಕಗಳಿವೆ. ಜಿಲ್ಲೆಯ 600ಕ್ಕೂ ಹೆಚ್ಚು ಕಾರ್ಮಿಕರಿಗೆ ಸುರಕ್ಷಿತಾ ಕಿಟ್ ಬಂದಿವೆ’ ಎಂದರು.</p>.<p>ಈ ವೇಳೆ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ವೆಂಕಟೇಶ, ಪ್ರಶಾಂತ ಸೇರಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಕಾರ್ಮಿಕ ಇಲಾಖೆಯ ಯಾವುದೇ ಸೌಲಭ್ಯಗಳನ್ನು ಪಡೆಯಬೇಕಾದರೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಕಾರ್ಮಿಕ ಕಾರ್ಡ್ ನೋಂದಣಿ ಮಾಡಿಸಿಕೊಳ್ಳಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.</p>.<p>ನಗರದ ಶಾಸಕರ ಕಚೇರಿಯಲ್ಲಿ ಸೋಮವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>‘ಕಾರ್ಮಿಕರಿಗಾಗಿ ಸರ್ಕಾರದ ಜಾರಿಗೆ ತಂದಿರುವ ಯೋಜನೆಗಳ ಲಾಭ ಪಡೆದುಕೊಳ್ಳಬೇಕಾದರೆ ನೋಂದಣಿ ಮಾಡಿಕೊಳ್ಳುವುದು ಅಗತ್ಯ. ಇದರಿಂದ ಎಲ್ಲ ಬಗೆಯ ಯೋಜನೆಗಳನ್ನು ನೇರವಾಗಿ ಪಡೆಯಲು ಅನುಕೂಲ ಆಗಲಿದೆ’ ಎಂದರು.</p>.<p>‘ಜೀವಕ್ಕಿಂತ ದೊಡ್ಡ ವಸ್ತು ಬೇರೊಂದು ಇಲ್ಲ. ಕಾರ್ಮಿಕರು ಕೆಲಸದ ವೇಳೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಸುರಕ್ಷಿತಾ ಕಿಟ್ಗಳನ್ನು ಸದ್ಬಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಕಾರ್ಮಿಕರೊಬ್ಬರು ತಮಗೆ ಇಲಾಖೆಯಿಂದ ಸಾಲ ಸೌಲಭ್ಯ ಸಿಗುತ್ತಿಲ್ಲ ಎಂದು ಶಾಸಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಕಾರ್ಮಿಕರ ಅರ್ಜಿಯನ್ನು ಪರಿಗಣಿಸಿ, ಬ್ಯಾಂಕ್ ಅಧಿಕಾರಿಗಳನ್ನು ವಿಚಾರಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.</p>.<p>ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರ್ ಮಾತನಾಡಿ, ‘ಸುರಕ್ಷಿತಾ ಕಿಟ್ನಲ್ಲಿ ಹೆಲ್ಮೆಟ್, ಗ್ಲೌಸ್, ಶೂ, ಸಾಕ್ಸ್, ಕನ್ನಡಕಗಳಿವೆ. ಜಿಲ್ಲೆಯ 600ಕ್ಕೂ ಹೆಚ್ಚು ಕಾರ್ಮಿಕರಿಗೆ ಸುರಕ್ಷಿತಾ ಕಿಟ್ ಬಂದಿವೆ’ ಎಂದರು.</p>.<p>ಈ ವೇಳೆ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟೆ, ವೆಂಕಟೇಶ, ಪ್ರಶಾಂತ ಸೇರಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>