<p>ಹುಣಸಗಿ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ನಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಅಲೆಮಾರಿ ಸಮುದಾಯಗಳು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.</p>.<p>ಪಟ್ಟಣದ ವಿವಿಧೆಡೆ ಗುಡಿಸಲು ಕಟ್ಟಿಕೊಂಡು ಕೊಡ ದುರಸ್ತಿ, ಬಂಬೂಗಳ ಮಾರಾಟ ಸೇರಿದಂತೆ ಹಲವು ಕಾರ್ಯಗಳಲ್ಲಿ ನಿರತರಾಗಿದ್ದ ಕಲೆಗಾರ, ದಾಸರ ಮತ್ತು ಬೋವಿ ಕುಟುಂಬಗಳು ಲಾಕ್ಡೌನ್ನಿಂದಾಗಿ ದುಡಿಮೆಯಿಲ್ಲದೆ ಕಂಗಾಲಾಗಿವೆ.</p>.<p>ಪಟ್ಟಣದ ಎಪಿಎಂಸಿ ಹತ್ತಿರ ಗುಡಿಸಲು ಕಟ್ಟಿಕೊಂಡು ಕೂಲಿ ಹಾಗೂ ಕೊಡ ದುರಸ್ತಿ ಮಾಡುವ ಕಲಾಯಿಗಾರ ಕುಟುಂಗಳಿದ್ದು, ಕೆಲಸ ಸಿಗದೆ ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.</p>.<p>‘ಇಲ್ಲಿ ಕೆಲಸವೂ ಇಲ್ಲ. ಬೇರೆ ಗ್ರಾಮಗಳಿಗೆ ತೆರಳುವಂತಿಲ್ಲ. ಮಕ್ಕಳಿಗೆ ಊಟ ನೀಡಲು ಸಹ ಸಾಧ್ಯವಾಗುತ್ತಿಲ್ಲ. ನಮ್ಮ ಬದುಕು ತೊಂದರೆಯಲ್ಲಿದ್ದು ಸ್ಥಳಿಯ ಜನಪ್ರತಿನಿಧಿಗಳು ಹಾಗೂ ದಾನಿಗಳ ಸಹಾಯಕ್ಕಾಗಿ ಮುಖ ನೋಡುವಂತಾಗಿದೆ’ ಎಂದು ಸೈಫನ್ ಕಲೆಗಾರ ಹಾಗೂ ರಾಜೇಸಾಬ ಬೇಸರ ವ್ಯಕ್ತಪಡಿಸಿದರು.</p>.<p>ಕೊರೊನಾ ಸೋಂಕು ತೊಲಗಿಸುವ ನಿಟ್ಟಿನಲ್ಲಿ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ ಕೆಲಸವಿಲ್ಲದೆ ನಮ್ಮಂಥ ಬಡುವರು ಹೇಗೆ ಜೀವನ ನಡೆಸಬೇಕು ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ನಮ್ಮ ಹೊಟ್ಟೆಗೆ ಏನಾದರೂ ಕೊಟ್ಟು ಪುಣ್ಯ ಕಟ್ಟಿಕೊಳ್ಳಲಿ’ ಎಂದು ರೇಣುಕಾ ಹಾಗೂ ರಾಜಮ್ಮ ಹೇಳಿದರು.</p>.<p>ಮೂರು ದಶಕಗಳಿಂದಲೂ ಈ ಕುಟುಂಬಗಳು ಇಲ್ಲಿಯೇ ದೇವಪುರ ಮನಗೂಳಿ ರಾಜ್ಯಹೆದ್ದಾರಿಯ ಪಕ್ಕದ ರಸ್ತೆಯಲ್ಲಿಯೇ ಶೆಡ್ ಹಾಗೂ ಗುಡಿಸಲುಗಳನ್ನು ಕಟ್ಟಿಕೊಂಡು ಜೀವನ ನಡೆಸುತ್ತಿವೆ. ಇವರಲ್ಲಿ ಕೆಲವು ಜನರ ಬಳಿ ಬಿಪಿಎಲ್ ಕಾರ್ಡ್ಗಳಿವೆ. ಉಳಿದವರ ಬಳಿ ಇಲ್ಲ. ಹೀಗಾಗಿ ಪಡಿತರವೂ ಇಲ್ಲದೆ ಹಸಿವಿನಿಂದ ಬಳಲುವ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಕಳೆದ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಹಲವಾರು ಸಂಘಟ ನೆಗಳು ಊಟ ನೀಡುವ ಮೂಲಕ ನೆರವಿಗೆ ನಿಂತಿದ್ದವು. ಈ ವರ್ಷ ಅದೂ ಇಲ್ಲ. ಸ್ಥಳೀಯ ಜನಪ್ರತಿನಿಧಿಗಳು, ದಾನಿಗಳು, ಸಂಘಟನೆಗಳು ನೆರವಿಗೆ ಬರಬೇಕು ಎಂದು ಇಲ್ಲಿನ ಕಾರ್ಮಿಕರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸಗಿ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಲಾಕ್ಡೌನ್ನಿಂದ ಬಡವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಅಲೆಮಾರಿ ಸಮುದಾಯಗಳು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ.</p>.<p>ಪಟ್ಟಣದ ವಿವಿಧೆಡೆ ಗುಡಿಸಲು ಕಟ್ಟಿಕೊಂಡು ಕೊಡ ದುರಸ್ತಿ, ಬಂಬೂಗಳ ಮಾರಾಟ ಸೇರಿದಂತೆ ಹಲವು ಕಾರ್ಯಗಳಲ್ಲಿ ನಿರತರಾಗಿದ್ದ ಕಲೆಗಾರ, ದಾಸರ ಮತ್ತು ಬೋವಿ ಕುಟುಂಬಗಳು ಲಾಕ್ಡೌನ್ನಿಂದಾಗಿ ದುಡಿಮೆಯಿಲ್ಲದೆ ಕಂಗಾಲಾಗಿವೆ.</p>.<p>ಪಟ್ಟಣದ ಎಪಿಎಂಸಿ ಹತ್ತಿರ ಗುಡಿಸಲು ಕಟ್ಟಿಕೊಂಡು ಕೂಲಿ ಹಾಗೂ ಕೊಡ ದುರಸ್ತಿ ಮಾಡುವ ಕಲಾಯಿಗಾರ ಕುಟುಂಗಳಿದ್ದು, ಕೆಲಸ ಸಿಗದೆ ಅತಂತ್ರ ಸ್ಥಿತಿಗೆ ಸಿಲುಕಿದ್ದಾರೆ.</p>.<p>‘ಇಲ್ಲಿ ಕೆಲಸವೂ ಇಲ್ಲ. ಬೇರೆ ಗ್ರಾಮಗಳಿಗೆ ತೆರಳುವಂತಿಲ್ಲ. ಮಕ್ಕಳಿಗೆ ಊಟ ನೀಡಲು ಸಹ ಸಾಧ್ಯವಾಗುತ್ತಿಲ್ಲ. ನಮ್ಮ ಬದುಕು ತೊಂದರೆಯಲ್ಲಿದ್ದು ಸ್ಥಳಿಯ ಜನಪ್ರತಿನಿಧಿಗಳು ಹಾಗೂ ದಾನಿಗಳ ಸಹಾಯಕ್ಕಾಗಿ ಮುಖ ನೋಡುವಂತಾಗಿದೆ’ ಎಂದು ಸೈಫನ್ ಕಲೆಗಾರ ಹಾಗೂ ರಾಜೇಸಾಬ ಬೇಸರ ವ್ಯಕ್ತಪಡಿಸಿದರು.</p>.<p>ಕೊರೊನಾ ಸೋಂಕು ತೊಲಗಿಸುವ ನಿಟ್ಟಿನಲ್ಲಿ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಆದರೆ ಕೆಲಸವಿಲ್ಲದೆ ನಮ್ಮಂಥ ಬಡುವರು ಹೇಗೆ ಜೀವನ ನಡೆಸಬೇಕು ಎಂಬುದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು. ನಮ್ಮ ಹೊಟ್ಟೆಗೆ ಏನಾದರೂ ಕೊಟ್ಟು ಪುಣ್ಯ ಕಟ್ಟಿಕೊಳ್ಳಲಿ’ ಎಂದು ರೇಣುಕಾ ಹಾಗೂ ರಾಜಮ್ಮ ಹೇಳಿದರು.</p>.<p>ಮೂರು ದಶಕಗಳಿಂದಲೂ ಈ ಕುಟುಂಬಗಳು ಇಲ್ಲಿಯೇ ದೇವಪುರ ಮನಗೂಳಿ ರಾಜ್ಯಹೆದ್ದಾರಿಯ ಪಕ್ಕದ ರಸ್ತೆಯಲ್ಲಿಯೇ ಶೆಡ್ ಹಾಗೂ ಗುಡಿಸಲುಗಳನ್ನು ಕಟ್ಟಿಕೊಂಡು ಜೀವನ ನಡೆಸುತ್ತಿವೆ. ಇವರಲ್ಲಿ ಕೆಲವು ಜನರ ಬಳಿ ಬಿಪಿಎಲ್ ಕಾರ್ಡ್ಗಳಿವೆ. ಉಳಿದವರ ಬಳಿ ಇಲ್ಲ. ಹೀಗಾಗಿ ಪಡಿತರವೂ ಇಲ್ಲದೆ ಹಸಿವಿನಿಂದ ಬಳಲುವ ಸಂಕಷ್ಟಕ್ಕೆ ಸಿಲುಕಿದ್ದಾರೆ.</p>.<p>ಕಳೆದ ವರ್ಷ ಲಾಕ್ಡೌನ್ ಸಂದರ್ಭದಲ್ಲಿ ಹಲವಾರು ಸಂಘಟ ನೆಗಳು ಊಟ ನೀಡುವ ಮೂಲಕ ನೆರವಿಗೆ ನಿಂತಿದ್ದವು. ಈ ವರ್ಷ ಅದೂ ಇಲ್ಲ. ಸ್ಥಳೀಯ ಜನಪ್ರತಿನಿಧಿಗಳು, ದಾನಿಗಳು, ಸಂಘಟನೆಗಳು ನೆರವಿಗೆ ಬರಬೇಕು ಎಂದು ಇಲ್ಲಿನ ಕಾರ್ಮಿಕರು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>