ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಮಠಕಲ್: ಆಸ್ತಿಗಾಗಿ ಪತ್ನಿಯ ಕೊಲೆ, ಪತಿ ಬಂಧನ

Last Updated 5 ಜನವರಿ 2021, 8:50 IST
ಅಕ್ಷರ ಗಾತ್ರ

ಗುರುಮಠಕಲ್ (ಯಾದಗಿರಿ ಜಿಲ್ಲೆ): ಆಸ್ತಿ ಹಂಚಿಕೆಯ ವಿಷಯಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಸೋಮವಾರ ತಡರಾತ್ರಿ ಜರುಗಿದೆ.

ಮೃತರನ್ನು ತಾಲ್ಲೂಕಿನ ಗಾಜರಕೋಟ ಗ್ರಾಮದ ನರಸಮ್ಮ (40) ಎಂದು ಗುರುತಿಸಲಾಗಿದ್ದು, ಆರೋಪಿ ಭೀಮಣ್ಣನನ್ನು (45) ಪೊಲೀಸರು ಬಂಧಿಸಿದ್ದಾರೆ.

ಮೃತ ನರಸಮ್ಮ ಭೀಮಣ್ಣನ ಎರಡನೇ ಪತ್ನಿಯಾಗಿದ್ದು, ಮೊದಲ ಪತ್ನಿ ಮರಣಹೊಂದಿದ ನಂತರ ನರಸಮ್ಮರನ್ನು ಮದುವೆಯಾಗಿದ್ದರು.

ನರಸಮ್ಮ ಹಾಗೂ ಭೀಮಣ್ಣ ಗ್ರಾಮದ ಹೊರವಲಯದಲ್ಲಿ ಮನೆಯಲ್ಲಿದ್ದರು. ಸೋಮವಾರ ರಾತ್ರಿ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಸುವಂತೆ ನರಸಮ್ಮ ಕೇಳಿದ್ದರಿಂದ ಆರಂಭವಾದ ಜಗಳ ಕೊಲೆಯಲ್ಲಿ ಮುಗಿದಿದೆ.

ಸ್ಥಳಕ್ಕೆ ಭೇಟಿ ನೀಡಿದ ಪಿಎಸ್ಐ ಹಣಮಂತು ಬಂಕಲಗಿ ಆರೋಪಿಯನ್ನು ಬಂಧಿಸಿದ್ದಾರೆ.
ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT