<p><strong>ಸುರಪುರ</strong>: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಹಾಡು ಹಗಲೆ ವಿದ್ಯಾರ್ಥಿನಿಯ ಕೊಲೆಯಾಗಿರುವುದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಿದರ್ಶನ’ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಟೀಕಿಸಿದರು.</p>.<p>ಕ್ಷೇತ್ರದ ಬೈಲಕುಂಟಿ ಗ್ರಾಮದಲ್ಲಿ ಶನಿವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.<br> ‘ವಿಶ್ವದಲ್ಲೆ ನೆಚ್ಚಿನ ಆಡಳಿತಗಾರ ಎಂದು ಖ್ಯಾತಿ ಹೊಂದಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುವುದು. ಪತ್ರಿಕೆಗಳಲ್ಲಿ ಇಲ್ಲ ಸಲ್ಲದ ಜಾಹೀರಾತು ನೀಡುತ್ತಿರುವುದು ಹತಾಶೆಯ ಪರಮಾವಧಿ’ ಎಂದು ಚುಚ್ಚಿದರು.</p>.<p>‘ಬಿಜೆಪಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮತ್ತೆ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಇದೆ. ಕಾರಣ ಲೋಕಸಭೆಯ ಅಭ್ಯರ್ಥಿ ರಾಜಾ ಅಮರೇಶ್ವರನಾಯಕ ಮತ್ತು ನನ್ನನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.</p>.<p>‘ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮತ್ತಷ್ಟು ಕೆಲಸಗಳನ್ನು ಮಾಡುತ್ತೇನೆ. ಎರಡು ಬೆಳೆಗೆ ಕಾಲುವೆಗೆ ನೀರು ಬಿಡಿಸುತ್ತೇನೆ. ನಿಮ್ಮೆಲ್ಲರ ಬದುಕು ಹಸನಾಗಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ರಾಜೂಗೌಡ ಅವರ ಮೇಲೆ ಹೂ ಹಾಕಿ ಸ್ವಾಗತಿಸಿದರು. ಮುಖಂಡರಾದ ಎಚ್.ಸಿ. ಪಾಟೀಲ, ವೀರಸಂಗಪ್ಪ ಹಾವೇರಿ, ರಂಗನಾಥ ದೊರೆ ಇತರರು ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ</strong>: ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಹಾಡು ಹಗಲೆ ವಿದ್ಯಾರ್ಥಿನಿಯ ಕೊಲೆಯಾಗಿರುವುದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಿದರ್ಶನ’ ಎಂದು ಬಿಜೆಪಿ ಅಭ್ಯರ್ಥಿ ರಾಜೂಗೌಡ ಟೀಕಿಸಿದರು.</p>.<p>ಕ್ಷೇತ್ರದ ಬೈಲಕುಂಟಿ ಗ್ರಾಮದಲ್ಲಿ ಶನಿವಾರ ಮತಯಾಚನೆ ಮಾಡಿ ಅವರು ಮಾತನಾಡಿದರು.<br> ‘ವಿಶ್ವದಲ್ಲೆ ನೆಚ್ಚಿನ ಆಡಳಿತಗಾರ ಎಂದು ಖ್ಯಾತಿ ಹೊಂದಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ಟೀಕಿಸುವುದು. ಪತ್ರಿಕೆಗಳಲ್ಲಿ ಇಲ್ಲ ಸಲ್ಲದ ಜಾಹೀರಾತು ನೀಡುತ್ತಿರುವುದು ಹತಾಶೆಯ ಪರಮಾವಧಿ’ ಎಂದು ಚುಚ್ಚಿದರು.</p>.<p>‘ಬಿಜೆಪಿ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲಿದೆ. ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ಮತ್ತೆ ಬಿಜೆಪಿ ಸರ್ಕಾರ ರಚಿಸುವ ಸಾಧ್ಯತೆ ಇದೆ. ಕಾರಣ ಲೋಕಸಭೆಯ ಅಭ್ಯರ್ಥಿ ರಾಜಾ ಅಮರೇಶ್ವರನಾಯಕ ಮತ್ತು ನನ್ನನ್ನು ಗೆಲ್ಲಿಸಿ’ ಎಂದು ಮನವಿ ಮಾಡಿದರು.</p>.<p>‘ಈಗಾಗಲೇ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮತ್ತಷ್ಟು ಕೆಲಸಗಳನ್ನು ಮಾಡುತ್ತೇನೆ. ಎರಡು ಬೆಳೆಗೆ ಕಾಲುವೆಗೆ ನೀರು ಬಿಡಿಸುತ್ತೇನೆ. ನಿಮ್ಮೆಲ್ಲರ ಬದುಕು ಹಸನಾಗಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>ಗ್ರಾಮಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ರಾಜೂಗೌಡ ಅವರ ಮೇಲೆ ಹೂ ಹಾಕಿ ಸ್ವಾಗತಿಸಿದರು. ಮುಖಂಡರಾದ ಎಚ್.ಸಿ. ಪಾಟೀಲ, ವೀರಸಂಗಪ್ಪ ಹಾವೇರಿ, ರಂಗನಾಥ ದೊರೆ ಇತರರು ಹಾಜರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>