ವಕೀಲ ಸಂತೋಷ ದೇಶಮುಖ ಮಾತನಾಡಿ, ಸಂಘದಲ್ಲಿ 158 ಸದಸ್ಯರಿದ್ದು ಅದರಲ್ಲಿ 67 ಕ್ಕೂ ಹೆಚ್ಚು ಸದಸ್ಯರು ಸಹಿ ಮಾಡಿದ ಪತ್ರವನ್ನು ಸಿದ್ಧಪಡಿಸಿ ಏ.22 ರಂದು ಕರೆದ ಹಿರಿಯರ ಸಭೆಯಲ್ಲಿ ಭಾಗವಹಿಸಿ ಚುನಾವಣೆ ನಡೆಸುವ ಕುರಿತು ಮತ್ತು ಅವಿಶ್ವಾಸ ಮಂಡನೆ ಬಗ್ಗೆ ಚರ್ಚಿಸಲು ಆಸಕ್ತವಹಿಸಿದ್ದಾರೆ ಎಂದರು. ವಕೀಲ ಮಲ್ಲಿಕಾರ್ಜುನ ಬಕ್ಕಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.