‘ಶುಕ್ರವಾರ ಬೆಳಿಗ್ಗೆ ಗ್ರಾಮದ ಘಟನಾ ಸ್ಥಳಕ್ಕೆ ನಮ್ಮ ಸಿಬ್ಬಂದಿಯ ಜೊತೆ ಭೇಟಿ ನೀಡಿ ಪರಿಶೀಲಿಸಿದೇವು. ಅಲ್ಲಿ ಚಿರತೆಯ ಯಾವುದೇ ಹೆಜ್ಜೆ ಗುರುತು ಕಾಣಿಸಿಕೊಂಡಿಲ್ಲ. ಅಲ್ಲದೆ ಪ್ರತ್ಯಕ್ಷದರ್ಶಿ ಪರಶುರಾಮ ಜೊತೆ ಮಾತನಾಡಿ ಮಾಹಿತಿ ಪಡೆದುಕೊಂಡೆವು. ಗ್ರಾಮಸ್ಥರಿಗೆ ಚಿರತೆ ಇರುವುದುಕಂಡು ಬಂದರೆ ಅರಣ್ಯ ಇಲಾಖೆಗೆ ತಕ್ಷಣ ಮಾಹಿತಿ ನೀಡುವಂತೆ’ ಉಪವಲಯ ಅರಣ್ಯ ಅಧಿಕಾರಿ ಐ.ಬಿ.ಹೂಗಾರ ತಿಳಿಸಿದರು.