<p><strong>ಸುರಪುರ: ‘</strong>ಕುಷ್ಠ ರೋಗವನ್ನು ಗುಣಪಡಿಸಬಹುದಾಗಿದೆ ಮತ್ತು ಆರಂಭಿಕ ಹಂತಗಳ ಚಿಕಿತ್ಸೆಯಿಂದ ಅಂಗವಿಕಲತೆಯನ್ನು ತಡೆಯಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸ್ಪರ್ಶ ಕುಷ್ಠ ಅರಿವು ಕಾರ್ಯಕ್ರಮದ ನಿಮಿತ್ತವಾಗಿ ಪೋಸ್ಟರ್ ಬಿಡುಗಡೆ ಮಾಡಿ, ಪ್ರತಿಜ್ಞೆ ಬೋಧಿಸಿ ಅವರು ಮಾತನಾಡಿದರು.</p>.<p>‘ಕುಷ್ಠ ರೋಗವು ಮಾನವ ಕುಲಕ್ಕೆ ತಿಳಿದಿರುವ ಅತ್ಯಂತ ಹಳೆಯ ಕಾಯಿಲೆಯಾಗಿದೆ. ಮೈಕ್ರೋ ಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ’ ಎಂದು ಹೇಳಿದರು.</p>.<p>‘ಚರ್ಮದ ಮೇಲೆ ಗಂಟುಗಳು, ಕಣ್ಣಿನ ರೆಪ್ಪೆಗಳು ಮುಚ್ಚುವಲ್ಲಿ ತೊಂದರೆ, ಕೈ-ಕಾಲುಗಳಲ್ಲಿ ಬಹುದಿನದ ಗಾಯ, ಕೈ-ಕಾಲುಗಳಲ್ಲಿ ಬೆರಳು ಮಡಚಿ ಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಕಾ-ಕಾಲು ಜುಮ್ಮು ಎನಿಸುವಿಕೆ, ಅಂಗೈ ಅಥವಾ ಬಲಹೀನತೆ ಇವುಗಳೆಲ್ಲವೂ ಕುಷ್ಠ ರೋಗದ ಲಕ್ಷಣಗಳಾಗಿವೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರತಿ ವರ್ಷ ಜನವರಿ 30 ರಂದು ಕುಷ್ಠ ರೋಗ ನಿರ್ಮೂಲನಾ ದಿನವನ್ನು ವಿಶಿಷ್ಟ ಧ್ಯೆಯದೊಂದಿಗೆ ಆಚರಿಸಲಾಗುತ್ತದೆ. ನಿಜವಾದ ಸವಾಲು, ಕಳಂಕ 2026 ರ ಕುಷ್ಠ ರೋಗ ದಿನಾಚರಣೆಯ ಘೋಷ ವಾಕ್ಯವಾಗಿದೆ’ ಎಂದರು.</p>.<p>‘ಕುಷ್ಠ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆಯಲು ಪ್ರೇರೇಪಿಸುವುದು. ಕಾಯಿಲೆಯ ಕುರಿತಾದ ಭಯ ಮತ್ತು ತಾರತಮ್ಯವನ್ನು ತೊಡೆದುಹಾಕುವುದು. ಕುಷ್ಠರೋಗ ಬಾಧಿತರು ಸಮಾಜದಲ್ಲಿ ಗೌರವದಿಂದ ಬದುಕಲು ಸಹಕರಿಸುವುದು ಪ್ರಮುಖ ಉದ್ದೇಶವಾಗಿದೆ’ ಎಂದರು.</p>.<p>‘ಕುಷ್ಠ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಸಲಹೆ, ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ: ‘</strong>ಕುಷ್ಠ ರೋಗವನ್ನು ಗುಣಪಡಿಸಬಹುದಾಗಿದೆ ಮತ್ತು ಆರಂಭಿಕ ಹಂತಗಳ ಚಿಕಿತ್ಸೆಯಿಂದ ಅಂಗವಿಕಲತೆಯನ್ನು ತಡೆಯಬಹುದು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಆರ್.ವಿ. ನಾಯಕ ತಿಳಿಸಿದರು.</p>.<p>ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಸ್ಪರ್ಶ ಕುಷ್ಠ ಅರಿವು ಕಾರ್ಯಕ್ರಮದ ನಿಮಿತ್ತವಾಗಿ ಪೋಸ್ಟರ್ ಬಿಡುಗಡೆ ಮಾಡಿ, ಪ್ರತಿಜ್ಞೆ ಬೋಧಿಸಿ ಅವರು ಮಾತನಾಡಿದರು.</p>.<p>‘ಕುಷ್ಠ ರೋಗವು ಮಾನವ ಕುಲಕ್ಕೆ ತಿಳಿದಿರುವ ಅತ್ಯಂತ ಹಳೆಯ ಕಾಯಿಲೆಯಾಗಿದೆ. ಮೈಕ್ರೋ ಬ್ಯಾಕ್ಟೀರಿಯಂ ಲೆಪ್ರೆ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ’ ಎಂದು ಹೇಳಿದರು.</p>.<p>‘ಚರ್ಮದ ಮೇಲೆ ಗಂಟುಗಳು, ಕಣ್ಣಿನ ರೆಪ್ಪೆಗಳು ಮುಚ್ಚುವಲ್ಲಿ ತೊಂದರೆ, ಕೈ-ಕಾಲುಗಳಲ್ಲಿ ಬಹುದಿನದ ಗಾಯ, ಕೈ-ಕಾಲುಗಳಲ್ಲಿ ಬೆರಳು ಮಡಚಿ ಕೊಂಡಿರುವುದು, ನಡೆಯುವಾಗ ಕಾಲು ಎಳೆಯುವುದು, ಕಾ-ಕಾಲು ಜುಮ್ಮು ಎನಿಸುವಿಕೆ, ಅಂಗೈ ಅಥವಾ ಬಲಹೀನತೆ ಇವುಗಳೆಲ್ಲವೂ ಕುಷ್ಠ ರೋಗದ ಲಕ್ಷಣಗಳಾಗಿವೆ’ ಎಂದು ಮಾಹಿತಿ ನೀಡಿದರು.</p>.<p>‘ಪ್ರತಿ ವರ್ಷ ಜನವರಿ 30 ರಂದು ಕುಷ್ಠ ರೋಗ ನಿರ್ಮೂಲನಾ ದಿನವನ್ನು ವಿಶಿಷ್ಟ ಧ್ಯೆಯದೊಂದಿಗೆ ಆಚರಿಸಲಾಗುತ್ತದೆ. ನಿಜವಾದ ಸವಾಲು, ಕಳಂಕ 2026 ರ ಕುಷ್ಠ ರೋಗ ದಿನಾಚರಣೆಯ ಘೋಷ ವಾಕ್ಯವಾಗಿದೆ’ ಎಂದರು.</p>.<p>‘ಕುಷ್ಠ ರೋಗದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಆರಂಭಿಕ ಹಂತದಲ್ಲೇ ಚಿಕಿತ್ಸೆ ಪಡೆಯಲು ಪ್ರೇರೇಪಿಸುವುದು. ಕಾಯಿಲೆಯ ಕುರಿತಾದ ಭಯ ಮತ್ತು ತಾರತಮ್ಯವನ್ನು ತೊಡೆದುಹಾಕುವುದು. ಕುಷ್ಠರೋಗ ಬಾಧಿತರು ಸಮಾಜದಲ್ಲಿ ಗೌರವದಿಂದ ಬದುಕಲು ಸಹಕರಿಸುವುದು ಪ್ರಮುಖ ಉದ್ದೇಶವಾಗಿದೆ’ ಎಂದರು.</p>.<p>‘ಕುಷ್ಠ ರೋಗದ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ವೈದ್ಯಾಧಿಕಾರಿಗಳಿಂದ ಸಲಹೆ, ಚಿಕಿತ್ಸೆ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>