<p><strong>ಸುರಪುರ:</strong> ‘ಸ್ವಾಸ್ಥ್ಯ ಸಮಾಜ ನಿರ್ಮಾಣವಾದರೆ ಮಾತ್ರ ಬದುಕು ಸುಂದರವಾಗುತ್ತದೆ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ತಹಶೀಲ್ದಾರ್ ಎಚ್.ಎ. ಸರಕಾವಸ್ ಹೇಳಿದರು.</p>.<p>ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಮಹಾಂತ ಶಿವಯೋಗಿ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಎಲ್ಲ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಮುಖ್ಯವಾಗಿದೆ. ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶರೀರ ಮತ್ತು ಯೋಗ್ಯವಾದ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ದುಶ್ಚಟಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜಕ್ಕೆ ಶ್ರಮಿಸಿದವರು ಮಹಾಂತ ಶಿವಯೋಗಿಗಳು’ ಎಂದರು.</p>.<p>‘ಅವರ ಜನ್ಮದಿನವನ್ನು ಸರ್ಕಾರ ವ್ಯಸನ ಮುಕ್ತ ದಿನಾಚರಣೆಯಾಗಿ ಆಗಸ್ಟ್ 1ರಂದು ಆಚರಿಸುತ್ತದೆ. ಸಾರ್ವಜನಿಕರು ಹಾಗೂ ಯುವಜನರು ವ್ಯಸನಗಳಿಂದ ಮುಕ್ತವಾಗಲು ದಿನಾಚರಣೆ ಪ್ರೇರಣೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಮನಸ್ಸು, ದೇಹ, ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಸನ ದಾಸ್ಯವೂ ಸಹ ಸಾಮಾಜಿಕ ಪಿಡುಗಗಳಲ್ಲಿ ಒಂದಾಗಿದೆ. ಇಂತಹ ದುಶ್ಚಟಗಳಿಗೆ ಒಳಗಾಗಿರುವವರನ್ನು ವ್ಯಸನ ಮುಕ್ತಗೊಳಿಸುವ ಉದ್ದೇಶದಿಂದ ಮಹಾಂತ ಶಿವಯೋಗಿಗಳು ಮಹಾಂತ ಜೋಳಿಗೆ 1975 ರಿಂದ ಯೋಜನೆ ಪ್ರಾರಂಭಿಸಿ ಯಶಸ್ವಿಯಾದರು’ ಎಂದು ವಿವರಿಸಿದರು.</p>.<p>ತಹಶೀಲ್ದಾರ್ ಕಚೇರಿಯ ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರಪುರ:</strong> ‘ಸ್ವಾಸ್ಥ್ಯ ಸಮಾಜ ನಿರ್ಮಾಣವಾದರೆ ಮಾತ್ರ ಬದುಕು ಸುಂದರವಾಗುತ್ತದೆ. ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು’ ಎಂದು ತಹಶೀಲ್ದಾರ್ ಎಚ್.ಎ. ಸರಕಾವಸ್ ಹೇಳಿದರು.</p>.<p>ಇಲ್ಲಿಯ ತಹಶೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆಯಲ್ಲಿ ಮಹಾಂತ ಶಿವಯೋಗಿ ಸ್ವಾಮೀಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.</p>.<p>‘ಎಲ್ಲ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಮುಖ್ಯವಾಗಿದೆ. ದುಶ್ಚಟಗಳಿಗೆ ಬಲಿಯಾಗದೆ ಉತ್ತಮ ಶರೀರ ಮತ್ತು ಯೋಗ್ಯವಾದ ಮಾನಸಿಕತೆಯನ್ನು ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>‘ದುಶ್ಚಟಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಮನಸ್ಸು ಪರಿವರ್ತಿಸಿ, ಜನರಲ್ಲಿನ ದುಶ್ಚಟಗಳನ್ನು ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನ ಮುಕ್ತ ಸಮಾಜಕ್ಕೆ ಶ್ರಮಿಸಿದವರು ಮಹಾಂತ ಶಿವಯೋಗಿಗಳು’ ಎಂದರು.</p>.<p>‘ಅವರ ಜನ್ಮದಿನವನ್ನು ಸರ್ಕಾರ ವ್ಯಸನ ಮುಕ್ತ ದಿನಾಚರಣೆಯಾಗಿ ಆಗಸ್ಟ್ 1ರಂದು ಆಚರಿಸುತ್ತದೆ. ಸಾರ್ವಜನಿಕರು ಹಾಗೂ ಯುವಜನರು ವ್ಯಸನಗಳಿಂದ ಮುಕ್ತವಾಗಲು ದಿನಾಚರಣೆ ಪ್ರೇರಣೆಯಾಗಲಿದೆ’ ಎಂದು ತಿಳಿಸಿದರು.</p>.<p>‘ಮನಸ್ಸು, ದೇಹ, ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ವ್ಯಸನ ದಾಸ್ಯವೂ ಸಹ ಸಾಮಾಜಿಕ ಪಿಡುಗಗಳಲ್ಲಿ ಒಂದಾಗಿದೆ. ಇಂತಹ ದುಶ್ಚಟಗಳಿಗೆ ಒಳಗಾಗಿರುವವರನ್ನು ವ್ಯಸನ ಮುಕ್ತಗೊಳಿಸುವ ಉದ್ದೇಶದಿಂದ ಮಹಾಂತ ಶಿವಯೋಗಿಗಳು ಮಹಾಂತ ಜೋಳಿಗೆ 1975 ರಿಂದ ಯೋಜನೆ ಪ್ರಾರಂಭಿಸಿ ಯಶಸ್ವಿಯಾದರು’ ಎಂದು ವಿವರಿಸಿದರು.</p>.<p>ತಹಶೀಲ್ದಾರ್ ಕಚೇರಿಯ ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>