ನಗರ ಪ್ರಮುಖ ವೃತ್ತಗಳಲ್ಲಿ ಬ್ಯಾರಿಕೇಡ್: ನಗರದ ಪ್ರಮುಖ ವೃತ್ತಗಳಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದಾರೆ. ವೃತ್ತಗಳಲ್ಲಿ ಪೊಲೀಸರು ಇದ್ದು, ಸಂಚಾರ ಮಾಡದಂತೆ ತಿಳಿ ಹೇಳುತ್ತಿದ್ದಾರೆ. ಹೊಸಳ್ಳಿ ಕ್ರಾಸ್ ಬಳಿ ಬ್ಯಾರಿಕೇಡ್ ಹಾಕಿ ಇಬ್ಬರು ಪೊಲೀಸರು ಬೀಡುಬಿಟ್ಟಿದ್ದಾರೆ.
ಲಾಠಿ ಬೀಸಿದ ಪೊಲೀಸರು: ಜಿಲ್ಲೆಯಾದ್ಯಂತ ಲಾಕ್ಡೌನ್ಗೆ ಸಹಕರಿಸುವಂತೆ ಪೊಲೀಸರು ಬೈಕ್ಗಳಲ್ಲಿ ಸಂಚರಿಸುತ್ತಿದ್ದವರ ಮೇಲೆ ಲಾಠಿಬೀಸಿ ಬುದ್ದಿ ಕಲಿಸುತ್ತಿದ್ದಾರೆ. ಕೊರೊನಾ ಸೋಂಕು ಹರಡದಂತೆ ಮನೆಯಲ್ಲಿಯೇ ಇರಲು ಪ್ರಧಾನಿ, ಮುಖ್ಯಮಂತ್ರಿಯಾದಿಯಾಗಿ ಮನವಿ ಮಾಡಿಕೊಂಡಿದ್ದಾರೆ. ಆದರೆ, ಜಿಲ್ಲೆಯಲ್ಲಿ ಲಾಕ್ಡೌನ್ಗೆ ಜನರು ಬಗ್ಗಿಲ್ಲ. ಇದರಿಂದ ಬೈಕ್ ವಶಪಡಿಸಿಕೊಂಡಿದ್ದೇವೆ ಎನ್ನುತ್ತಾರೆ ಪೊಲೀಸರು.