<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ಡೌನ್ ಘೋಷಿಸಿದ್ದರೂಜನ ಸಂಚಾರ ಭಾನುವಾರ ಎಂದಿನಂತೆ ಸಾಗಿತ್ತು. ಸಂಜೆಯವರೆಗೂ ಅಂಗಡಿ ಮುಂಗಟ್ಟುಗಳಲ್ಲಿ ದಿನಸಿ, ತರಕಾರಿ, ಹಣ್ಣುಗಳ ವ್ಯಾಪಾರ ಜೋರಾಗಿ ನಡೆಯಿತು.</p>.<p class="Subhead">ಬ್ಯಾರಿಕೇಡ್ ತೆರವು: ನಗರದ ಪ್ರಮುಖ ವೃತ್ತಗಳಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಪ್ರಮುಖ ವೃತ್ತಗಳಲ್ಲಿ ಮಾತ್ರ ಪೊಲೀಸರು ಕಂಡು ಬಂದರು. ಸಾರ್ವಜನಿಕರು ಮಾಸ್ಕ್ ಧರಿಸದೆ, ಅಂತರ ಕಾಪಾಡಿಕೊಳ್ಳದೆ ತರಕಾರಿ ಖರೀದಿಸುವುದು ನಗರದ ಚಿರಂಜೀವಿ ಶಾಲೆ ಪಕ್ಕದಲ್ಲಿರುವ ತರಕಾರಿ ಅಂಗಡಿಗಳ ಮುಂದೆ ಕಾಣಿಸಿತು.</p>.<p>ತರಕಾರಿ, ಹಾಲು ಇನ್ನಿತರ ಅವಶ್ಯಕ ಸಾಮಗ್ರಿ ಖರೀದಿಗೆ ಮಧ್ಯಾಹ್ನದ 1 ಗಂಟೆವರೆಗೆ ಸಮಯ ನಿಗದಿ ಪಡಿಸಿದ್ದರೂ, ತರಕಾರಿ ವ್ಯಾಪಾರ ಮಾತ್ರ ಸಂಜೆವರೆಗೆ ನಡೆಯಿತು. ಜನರು ಮುಗಿಬಿದ್ದು ಖರೀದಿ ಮಾಡುವುದು ಕಂಡು ಬಂದಿತು. ಲಾಕ್ಡೌನ್ ಇರುತ್ತದೆ ಎಂದು ಕೆಲವರು ಅಗತ್ಯ ಸಾಮಗ್ರಿಗಳನ್ನು ಶನಿವಾರವೇ ಖರೀದಿದ್ದರು. ಆದರೆ, ಭಾನುವಾರವೂ ಅಂಗಡಿ ಮುಂಗಟ್ಟುಗಳು ತೆರೆದಿದ್ದವು.</p>.<p>ಇನ್ನುಳಿದಂತೆ ಮಧ್ಯಾಹ್ನದ ನಂತರ ಜನ ಸಂಚಾರ ವಿರಳವಾಗಿತ್ತು. ಸಂಜೆ ವೇಳೆ ಮತ್ತೆ ಜನರು ಮನೆಯಿಂದ ಹೊರ ಬಂದು ರಸ್ತೆಯಲ್ಲಿ ಓಡಾಟ ನಡೆಸಿದ್ದರು. ನಗರದ ಅಲ್ಲಲ್ಲಿ ಗುಂಪುಗೂಡಿ ಹರಟೆ ಹೊಡೆಯುವುದು ಕಾಣಿಸಿತು.</p>.<p>ಜಿಲ್ಲೆಯಲ್ಲಿ ಅರ್ಧ ದಿನದ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸಾಮಾನ್ಯ ದಿನದಂತೆ ಭಾನುವಾರವೂ ವ್ಯಾಪಾರ ವಹಿವಾಟು ನಡೆಯಿತು. ಆಟೊ, ಜೀಪ್, ಕಾರು, ಬೈಕ್ಗಳ ಓಡಾಟವೂ ನಿರಂತರವಾಗಿ ಸಾಗಿತ್ತು.</p>.<p>ಪೊಲೀಸರು ದಂಡ ವಿಧಿಸುವ ಕೆಲಸ ಮತ್ತಷ್ಟು ಮಾಡಿದರೆ ಮಾತ್ರ ಲಾಕ್ಡೌನ್ಗೆ ಅರ್ಥ ಬರುತ್ತದೆ. ಆದರೆ, ಜಿಲ್ಲೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ನಗರ ನಿವಾಸಿ ರಾಘವೇಂದ್ರ ಕೋಟಗೇರಾ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ಜಿಲ್ಲೆಯಲ್ಲಿ ಒಂದು ವಾರ ಕಾಲ ಲಾಕ್ಡೌನ್ ಘೋಷಿಸಿದ್ದರೂಜನ ಸಂಚಾರ ಭಾನುವಾರ ಎಂದಿನಂತೆ ಸಾಗಿತ್ತು. ಸಂಜೆಯವರೆಗೂ ಅಂಗಡಿ ಮುಂಗಟ್ಟುಗಳಲ್ಲಿ ದಿನಸಿ, ತರಕಾರಿ, ಹಣ್ಣುಗಳ ವ್ಯಾಪಾರ ಜೋರಾಗಿ ನಡೆಯಿತು.</p>.<p class="Subhead">ಬ್ಯಾರಿಕೇಡ್ ತೆರವು: ನಗರದ ಪ್ರಮುಖ ವೃತ್ತಗಳಲ್ಲಿ ಹಾಕಿದ್ದ ಬ್ಯಾರಿಕೇಡ್ಗಳನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಪ್ರಮುಖ ವೃತ್ತಗಳಲ್ಲಿ ಮಾತ್ರ ಪೊಲೀಸರು ಕಂಡು ಬಂದರು. ಸಾರ್ವಜನಿಕರು ಮಾಸ್ಕ್ ಧರಿಸದೆ, ಅಂತರ ಕಾಪಾಡಿಕೊಳ್ಳದೆ ತರಕಾರಿ ಖರೀದಿಸುವುದು ನಗರದ ಚಿರಂಜೀವಿ ಶಾಲೆ ಪಕ್ಕದಲ್ಲಿರುವ ತರಕಾರಿ ಅಂಗಡಿಗಳ ಮುಂದೆ ಕಾಣಿಸಿತು.</p>.<p>ತರಕಾರಿ, ಹಾಲು ಇನ್ನಿತರ ಅವಶ್ಯಕ ಸಾಮಗ್ರಿ ಖರೀದಿಗೆ ಮಧ್ಯಾಹ್ನದ 1 ಗಂಟೆವರೆಗೆ ಸಮಯ ನಿಗದಿ ಪಡಿಸಿದ್ದರೂ, ತರಕಾರಿ ವ್ಯಾಪಾರ ಮಾತ್ರ ಸಂಜೆವರೆಗೆ ನಡೆಯಿತು. ಜನರು ಮುಗಿಬಿದ್ದು ಖರೀದಿ ಮಾಡುವುದು ಕಂಡು ಬಂದಿತು. ಲಾಕ್ಡೌನ್ ಇರುತ್ತದೆ ಎಂದು ಕೆಲವರು ಅಗತ್ಯ ಸಾಮಗ್ರಿಗಳನ್ನು ಶನಿವಾರವೇ ಖರೀದಿದ್ದರು. ಆದರೆ, ಭಾನುವಾರವೂ ಅಂಗಡಿ ಮುಂಗಟ್ಟುಗಳು ತೆರೆದಿದ್ದವು.</p>.<p>ಇನ್ನುಳಿದಂತೆ ಮಧ್ಯಾಹ್ನದ ನಂತರ ಜನ ಸಂಚಾರ ವಿರಳವಾಗಿತ್ತು. ಸಂಜೆ ವೇಳೆ ಮತ್ತೆ ಜನರು ಮನೆಯಿಂದ ಹೊರ ಬಂದು ರಸ್ತೆಯಲ್ಲಿ ಓಡಾಟ ನಡೆಸಿದ್ದರು. ನಗರದ ಅಲ್ಲಲ್ಲಿ ಗುಂಪುಗೂಡಿ ಹರಟೆ ಹೊಡೆಯುವುದು ಕಾಣಿಸಿತು.</p>.<p>ಜಿಲ್ಲೆಯಲ್ಲಿ ಅರ್ಧ ದಿನದ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಸಾಮಾನ್ಯ ದಿನದಂತೆ ಭಾನುವಾರವೂ ವ್ಯಾಪಾರ ವಹಿವಾಟು ನಡೆಯಿತು. ಆಟೊ, ಜೀಪ್, ಕಾರು, ಬೈಕ್ಗಳ ಓಡಾಟವೂ ನಿರಂತರವಾಗಿ ಸಾಗಿತ್ತು.</p>.<p>ಪೊಲೀಸರು ದಂಡ ವಿಧಿಸುವ ಕೆಲಸ ಮತ್ತಷ್ಟು ಮಾಡಿದರೆ ಮಾತ್ರ ಲಾಕ್ಡೌನ್ಗೆ ಅರ್ಥ ಬರುತ್ತದೆ. ಆದರೆ, ಜಿಲ್ಲೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದೆ ಎಂದು ನಗರ ನಿವಾಸಿ ರಾಘವೇಂದ್ರ ಕೋಟಗೇರಾ ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>