ತಾಲ್ಲೂಕಿನ ಚಾಮನಾಳ ಗ್ರಾಮದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕನಿಷ್ಠ 20 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದರಲ್ಲಿ ಅನುಮಾನವಿಲ್ಲ. ರಾಯಚೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿಯ ಗೊಂದಲ ಇನ್ನೂ ಬಗೆಹರಿದಿಲ್ಲ. ಇನ್ನೂ ಪ್ರಚಾರ ಮಾಡುವುದು ಯಾವಾಗ?’ ಎಂದು ಅವರು ಲೇವಡಿ ಮಾಡಿದರು.