<p>ಸುರಪುರ: ‘ಇಲ್ಲಿಯ ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ 423 ಪ್ರಕರಣಗಳ ಪೈಕಿ 215 ಪ್ರಕರಣನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನ ತಿಳಿಸಿದರು.</p>.<p>ಶನಿವಾರ ಹಮ್ಮಿಕೊಂಡಿದ್ದ ಲೋಕ್ ಅದಾಲತ್ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ‘ಮೋಟಾರು ಅಪಘಾತ ಪ್ರಕರಣದಿಂದ ₹13.70 ಲಕ್ಷ, ಚೆಕ್ ಬೌನ್ಸ್ ಪ್ರಕರಣದಿಂದ ₹2 ಲಕ್ಷ, ಇಪಿ ಪ್ರಕರಣಗಳಲ್ಲಿ ₹1.21 ಲಕ್ಷ, ಲಘು ಪ್ರಕರಣದಿಂದ 17.2 ಲಕ್ಷ ವಸೂಲಿ ಮಾಡಿ ಕಕ್ಷಿದಾರರಿಗೆ ಭರಿಸಿಕೊಡಲಾಗಿದೆ’ ಎಂದು ಅವರು ತಿಳಿಸಿದರು.</p>.<p>‘ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ್ಯಾಯಾಲಯದಲ್ಲಿ ಪ್ರತಿ ತಿಂಗಳು ಎರಡನೆ ಶನಿವಾರ ಅದಾಲತ್ ಏರ್ಪಡಿಸಲಾಗುತ್ತಿದೆ. ಸಣ್ಣ ಪುಟ್ಟ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಕ್ಷಿದಾರರಿಗೆ ಇದೊಂದು ಒಳ್ಳೆ ಅವಕಾಶವಾಗಿದೆ. ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ವಕೀಲ ವಿಕ್ರಮರಾಜ ಸಂಧಾನಕಾರರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸುರಪುರ: ‘ಇಲ್ಲಿಯ ಜೆಎಂಎಫ್ಸಿ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ವಿವಿಧ ವ್ಯಾಜ್ಯಗಳಿಗೆ ಸಂಬಂಧಿಸಿದಂತೆ 423 ಪ್ರಕರಣಗಳ ಪೈಕಿ 215 ಪ್ರಕರಣನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತಾನ ತಿಳಿಸಿದರು.</p>.<p>ಶನಿವಾರ ಹಮ್ಮಿಕೊಂಡಿದ್ದ ಲೋಕ್ ಅದಾಲತ್ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ‘ಮೋಟಾರು ಅಪಘಾತ ಪ್ರಕರಣದಿಂದ ₹13.70 ಲಕ್ಷ, ಚೆಕ್ ಬೌನ್ಸ್ ಪ್ರಕರಣದಿಂದ ₹2 ಲಕ್ಷ, ಇಪಿ ಪ್ರಕರಣಗಳಲ್ಲಿ ₹1.21 ಲಕ್ಷ, ಲಘು ಪ್ರಕರಣದಿಂದ 17.2 ಲಕ್ಷ ವಸೂಲಿ ಮಾಡಿ ಕಕ್ಷಿದಾರರಿಗೆ ಭರಿಸಿಕೊಡಲಾಗಿದೆ’ ಎಂದು ಅವರು ತಿಳಿಸಿದರು.</p>.<p>‘ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ನ್ಯಾಯಾಲಯದಲ್ಲಿ ಪ್ರತಿ ತಿಂಗಳು ಎರಡನೆ ಶನಿವಾರ ಅದಾಲತ್ ಏರ್ಪಡಿಸಲಾಗುತ್ತಿದೆ. ಸಣ್ಣ ಪುಟ್ಟ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಕಕ್ಷಿದಾರರಿಗೆ ಇದೊಂದು ಒಳ್ಳೆ ಅವಕಾಶವಾಗಿದೆ. ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಅವರು ತಿಳಿಸಿದರು.</p>.<p>ವಕೀಲ ವಿಕ್ರಮರಾಜ ಸಂಧಾನಕಾರರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>