ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಲು ಹಾಗೂ ಕೋವಿಡ್-19 ಸಂಬಂಧಪಟ್ಟಂತೆ ಮುಂಜಾಗ್ರತೆ ಕ್ರಮ ವಹಿಸುವಂತೆ ಆರೋಗ್ಯಧಿಕಾರಿಗಳಿಗೆ ತಿಳಿಸಿದರು. ಮುಂಬರುವ ದಿನಗಳಲ್ಲಿ ಅಧಿಕಾರಿಗಳು ಆಕಸ್ಮಿಕವಾಗಿ ಆಯಾ ಕಚೇರಿಗಳಿಗೆ ಭೇಟಿ ನೀಡಿ, ಅವರ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ತಪ್ಪು ಕಂಡು ಬಂದಲ್ಲಿ ಅಂಥವರ ವಿರುದ್ಧ ಸೂಕ್ತ ಕ್ರಮಕ್ಕಾಗಿ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.ಗುರುಮಠಕಲ್ ತಹಶೀಲ್ದಾರ್ ಶರಣಬಸವ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಎಸ್.ಖಾದ್ರೊಳಿ, ಪುರಸಭೆ, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.