ಮಹಾ ಶಿವರಾತ್ರಿ ಜಾಗರಣೆಯ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಮಾರಾಟಕ್ಕಿಟ್ಟಿದ್ದ ಕಲ್ಲಂಗಡಿ ಒಂದರ ಬೆಲೆ ಸುಮಾರು ₹40 ರಿಂದ ₹100 ಗಡಿ ದಾಟಿತ್ತು. ಒಂದು ಡಜನ್ ಬಾಳೆ ಹಣ್ಣಿಗೆ ₹40 ರಂತೆ ಮಾರಾಟ ಮಾಡಲಾಗುತ್ತಿತ್ತು. ಸೇಬು, ಬಾಳೆಹಣ್ಣು, ಮೋಸಂಬಿ, ದ್ರಾಕ್ಷಿ ಬೆಲೆಗಳಲ್ಲೂ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಆದರೂ ಜನ ಖರೀದಿಗೆ ಹಿಂಜರಿಯುತ್ತಿಲ್ಲ ಎನ್ನುತ್ತಾರೆ ಹಣ್ಣಿನ ವ್ಯಾಪಾರಿಗಳು.