‘ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ಧಾರ್ಮಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು. ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು, ಆಕ್ರಮಣಗಳನ್ನು ನಿಲ್ಲಿಸಬೇಕು. ಸರ್ಕಾರ ಗೋಕರ್ಣದ ಸಮಗ್ರ ಅಭಿವೃದ್ಧಿಗೆ ಶ್ರೀರಾಮಚಂದ್ರಾಪುರಮಠಕ್ಕೆ ಅಗತ್ಯ ಸಹಕಾರ ನೀಡಬೇಕು. ರಾಘವೇಶ್ವರ ಶ್ರೀಗಳ ದೇಸಿ ಗೋತಳಿಗಳನ್ನು ಉಳಿಸುವ ಕಾರ್ಯಕ್ಕೆ ಸಹಕಾರ ನೀಡಬೇಕು. ಅನಗತ್ಯವಾಗಿ ತೊಂದರೆ ನೀಡಿದರೆ, ಜಾತಿ ಮತಗಳನ್ನು ಮರೆತು ಸರ್ಕಾರದ ಕ್ರಮವನ್ನು ಪ್ರತಿಭಟಿಸಬೇಕಾಗುತ್ತದೆ’ ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.