<p><strong>ಯಾದಗಿರಿ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ನೀಡಿದ ಕೊಡುಗೆ ಅನನ್ಯವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಅವರು ಜಾತ್ಯತೀತ ಮನೋಭಾವದವರಾಗಿದ್ದರು’ ಎಂದು ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮು ನಾಯಕ ಹೇಳಿದರು.</p>.<p>ನಗರದ ಕರವೇ ಕಚೇರಿಯಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಅಂಬೇಡ್ಕರ್ ನಮ್ಮನ್ನು ಸಮಾನತೆಯ ದೃಷ್ಠಿಯಲ್ಲಿ ಬದುಕಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಎಲ್ಲರೂ ಸಮಾನರೆಂದು ಜೀವಿಸೋಣ’ ಎಂದರು.</p>.<p>ಈ ವೇಳೆ ಹತ್ತಿಕುಣಿ ಗ್ರಾಮದ ವಿವಿಧ ಸಂಘಟನೆಯ 40ಕ್ಕೂ ಹೆಚ್ಚು ಯುವಕರು ಕರವೇ ಸಂಘಟನೆಗೆ ಸೇರ್ಪಡೆಯಾದರು.</p>.<p>ಸಿದ್ದು ನಾಯಕ, ಮಲ್ಲು ಮಾಳಿಕೇರಿ, ವಿಶ್ವರಾಧ್ಯ ದಿಮ್ಮೆ, ಸಾಹೇಬಗೌಡ ನಾಯಕ, ರಿಯಾಜ್ ಪಟೇಲ್, ದೀಪಕ್ ಒಡೆಯರ್, ಮಲ್ಲು ದೇವಕರ್, ಸಿದ್ದಪ್ಪ ಕ್ಯಾಸಪನಳ್ಳಿ, ಮಲ್ಲು ಹಾಲಗೇರಾ, ಭೀಮು ಬಸವಂತಪುರ, ನಾಗು ತಾಂಡೂರಕರ್, ಭೀಮು ಕೂಯಿಲೂರ, ನಾಗಪ್ಪ ಗೋಪಾಳಪುರ ಹಾಗೂ ವಿಜಯ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ:</strong> ‘ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ನೀಡಿದ ಕೊಡುಗೆ ಅನನ್ಯವಾಗಿದ್ದು, ಡಾ.ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಜಾತಿ, ಧರ್ಮಕ್ಕೆ ಸೀಮಿತರಾದವರಲ್ಲ. ಅವರು ಜಾತ್ಯತೀತ ಮನೋಭಾವದವರಾಗಿದ್ದರು’ ಎಂದು ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮು ನಾಯಕ ಹೇಳಿದರು.</p>.<p>ನಗರದ ಕರವೇ ಕಚೇರಿಯಲ್ಲಿ ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಅಂಬೇಡ್ಕರ್ ನಮ್ಮನ್ನು ಸಮಾನತೆಯ ದೃಷ್ಠಿಯಲ್ಲಿ ಬದುಕಲು ಅವಕಾಶ ಮಾಡಿಕೊಟ್ಟಿದ್ದಾರೆ. ಅವರ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಎಲ್ಲರೂ ಸಮಾನರೆಂದು ಜೀವಿಸೋಣ’ ಎಂದರು.</p>.<p>ಈ ವೇಳೆ ಹತ್ತಿಕುಣಿ ಗ್ರಾಮದ ವಿವಿಧ ಸಂಘಟನೆಯ 40ಕ್ಕೂ ಹೆಚ್ಚು ಯುವಕರು ಕರವೇ ಸಂಘಟನೆಗೆ ಸೇರ್ಪಡೆಯಾದರು.</p>.<p>ಸಿದ್ದು ನಾಯಕ, ಮಲ್ಲು ಮಾಳಿಕೇರಿ, ವಿಶ್ವರಾಧ್ಯ ದಿಮ್ಮೆ, ಸಾಹೇಬಗೌಡ ನಾಯಕ, ರಿಯಾಜ್ ಪಟೇಲ್, ದೀಪಕ್ ಒಡೆಯರ್, ಮಲ್ಲು ದೇವಕರ್, ಸಿದ್ದಪ್ಪ ಕ್ಯಾಸಪನಳ್ಳಿ, ಮಲ್ಲು ಹಾಲಗೇರಾ, ಭೀಮು ಬಸವಂತಪುರ, ನಾಗು ತಾಂಡೂರಕರ್, ಭೀಮು ಕೂಯಿಲೂರ, ನಾಗಪ್ಪ ಗೋಪಾಳಪುರ ಹಾಗೂ ವಿಜಯ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>