ಗುರುಮಠಕಲ್ ಪಟ್ಟಣದ ಬಸವೇಶ್ವರ ವೃತ್ತದಿಂದ ಗಾಂಧಿ ಮೈದಾನದವರೆಗೆ ಬುಧವಾರ ಕಾಂಗ್ರೆಸ್ ಆಯೋಜಿಸಿದ್ದ ಮೆರವಣಿಗೆಯಲ್ಲಿ ಮುಖಂಡರು ಭಾಗವಹಿಸಿದ್ದರು
'ಸಿದ್ದರಾಮಯ್ಯ ರಾಜೀನಾಮೆ ಪ್ರಶ್ನೆಯಿಲ್ಲ'
‘ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ’ ಎಂದು ಮಾಜಿ ಸಚಿವ ಬಾಬುರಾವ ಚಿಂಚನಸೂರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು‘ಸಿದ್ದರಾಮಯ್ಯ ಜನಪ್ರಿಯತೆ ಕುಗ್ಗಿಸಲು ಬಿಜೆಪಿ ಸುಳ್ಳು ಹುಟ್ಟಿಸಿದೆ. ಅವರಿಗೆ ಕಳಂಕತರುವ ಬಿಜೆಪಿಯ ಪ್ರಯತ್ನ ಫಲಿಸುವುದಿಲ್ಲ. ಸಮಸ್ಯೆಯೇ ಇಲ್ಲದಿರುವಾಗ ರಾಜೀನಾಮೆ ನೀಡುವ ಅವಶ್ಯಕತೆಯೇನು’ ಎಂದು ಪ್ರಶ್ನಿಸಿದರು.