ಯಾದಗಿರಿ: ಕಲ್ಯಾಣ ಕರ್ನಾಟಕದ ಪ್ರಸಿದ್ಧ ತಾಲ್ಲೂಕಿನ ಮೈಲಾಪುರ ಮೈಲಾರಲಿಂಗೇಶ್ವರ ಗುಹಾಂತರ ದೇವಾಲಯ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಭಕ್ತರು ತಂಡೋಪತಂಡವಾಗಿ ತೆರಳುತ್ತಿದ್ದಾರೆ.
ಸಂಕ್ರಾಂತಿ ಅಂಗವಾಗಿ ಪ್ರತಿ ವರ್ಷ ಮೈಲಾರಲಿಂಗೇಶ್ವರ ಪಲ್ಲಕ್ಕಿ ಉತ್ಸವ ನಡೆಯುತ್ತದೆ. ಈ ಬಾರಿ ಜನವರಿ 12ರಿಂದ 17ವರೆಗೆ ಜಾತ್ರಾ ಮಹೋತ್ಸವವಿದೆ.
ಜನವರಿ ತಿಂಗಳ ಆರಂಭದಿಂದಲೇ ಜಾತ್ರೆ ಸಡಗರ ಆರಂಭವಾಗಿದ್ದು, ವಿವಿಧ ಅಂಗಡಿ ಮುಂಗಟ್ಟುಗಳು ಬೀಡುಬಿಟ್ಟಿವೆ. ಪೂಜಾ ಸಾಮಾಗ್ರಿ, ಬೆಂಡು ಬತ್ತಾಸು, ಕಬ್ಬಿನ ಹಾಲಿನ ಅಂಗಡಿಗಳು ಹಾಕಲು ಸಿದ್ಧತೆ ಮಾಡಿಕೊಂಡಿವೆ.
ಜಿಲ್ಲೆಯ ‘ಎ’ ಗ್ರೇಡ್ ಸ್ಥಾನಮಾನ ಹೊಂದಿರುವ ಮೈಲಾಪುರ ದೇಗುಲ, ನೈಸರ್ಗಿಕವಾಗಿ ಬೆಳೆದ ಬೆಟ್ಟ ಗುಡ್ಡಗಳಲ್ಲಿ ತಲೆ ಎತ್ತಿ ನಿಂತಿದೆ. ಮೈಲಾರಲಿಂಗೇಶ್ವ ಜಾತ್ರೆಯ ದಿನಗಳಂದು ದೇವರ ಪಲ್ಲಕ್ಕಿಗೆ ಕುರಿಗಳನ್ನು ಹಾರಿಸುವುದನ್ನು ನಿಷೇಧಿಸಲಾಗಿದೆ.
ಪೊಲೀಸ್ ಬಂದೋಬಸ್ತ್: ಜಾತ್ರೆಯ ಅಂಗವಾಗಿ ಪೊಲೀಸ್ ಇಲಾಖೆಯಿಂದ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. 400ಕ್ಕೂ ಹೆಚ್ಚು ಹೋಂ ಗಾರ್ಡ್, 3 ಡಿವೈಎಸ್ಪಿ, 7 ಸಿಪಿಐ, 37 ಪಿಎಸ್ಐ, 71 ಎಎಸ್ಐ, 112 ಹೆಡ್ ಕಾನ್ಸ್ಟೆಬಲ್, 253 ಪಿಸಿ, 124 ಮಹಿಳಾ ಪಿಸಿ, ಡಿಎಆರ್ 3, 2 ಕೆಎಸ್ಆರ್ಪಿ ತುಕಡಿ ಪೊಲೀಸ್ ಸಿಬ್ಬಂದಿ ನೇಮಕ ಮಾಡಲಾಗಿದೆ. ಮೈಲಾಪುರ ಗ್ರಾಮ ಸಂಪರ್ಕಿಸುವ ಆರು ಕಡೆ ಚೆಕ್ಪೋಸ್ಟ್ ನಿರ್ಮಾಣ ಮಾಡಲಾಗಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಪಾದಯಾತ್ರೆಯಲ್ಲಿ ಭಕ್ತರು: ಮೈಲಾರಲಿಂಗೇಶ್ವರ ಜಾತ್ರೆಗಾಗಿ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಕಡೆಯಿಂದ ಭಕ್ತರು ಪಾದಯಾತ್ರೆ ಮೂಲಕ ತೆರಳುತ್ತಿದ್ದಾರೆ. ಇನ್ನೂ ಕೆಲವರು ಬೈಕ್, ಕಾರು, ಟಂಟಂ ಮೂಲಕ ಭಕ್ತರು ಬರುತ್ತಿದ್ದಾರೆ.
ಕಲ್ಯಾಣ ಕರ್ನಾಟಕದ ಪ್ರಸಿದ್ಧ ಮೈಲಾರಲಿಂಗೇಶ್ವರ ಜಾತ್ರೆಗೆ ರಾಜ್ಯವಲ್ಲದೇ ಆಂಧ್ರ ತೆಲಂಗಾಣ ಮಹಾರಾಷ್ಟ್ರದಿಂದ ಭಕ್ತರು ಆಗಮಿಸುತ್ತಿದ್ದು ಹಲವು ಸೌಲಭ್ಯಗಳನ್ನು ಕಲ್ಪಿಸಲಾಗಿದೆಸುರೇಶ ಅಂಕಲಗಿ ಯಾದಗಿರಿ ತಹಶೀಲ್ದಾರ್
ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಮಂಚ ಇರುವುದರಿಂದ ಗ್ರಾಮದ ಯಾರ ಮನೆಯಲ್ಲೂ ಇಲ್ಲ. ಅಲ್ಲದೇ ಕೋಳಿಯೂ ಇಲ್ಲ. ಇದೊಂದು ಶತಮಾನಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ.ಸುಭಾಷ ಹೆಡಗಿಮನಿ ದೇವಸ್ಥಾನ ಆರ್ಚಕ
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.