<p><strong>ಹುಣಸಗಿ</strong>: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಗ್ರಾಮೀಣ ಭಾಗದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಛಾಯಾ ಭಗವತಿ ದೇವಸ್ಥಾನದ ತಟದಲ್ಲಿರುವ ಕೃಷ್ಣಾ ನದಿಯಲ್ಲಿ ಭಕ್ತರು ಮಿಂದು ಬಳಿಕ ಛಾಯಾ ಭಗವತಿ ದೇವರಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಕೃಷ್ಣಾ ನದಿಯ ಗಜಗಾತ್ರದ ಕಲ್ಲು ಬಂಡೆಗಳ ಮೇಲೆ ಹಾಗೂ ಅದರ ತಳಭಾಗದ ನೆರಳಿನಲ್ಲಿ ಕುಳಿತು ಮನೆಯಿಂದ ತಂದ ತರಹೇವಾರಿ ಭೋಜನ ಸವಿದರು.</p>.<p>‘ಇನ್ನೂ ಕೆಲವರು ಕೃಷ್ಣಾ ನದಿಗೆ ಹೊಂದಿಕೊಂಡಿರುವ ನಿಸರ್ಗರಮಣೀಯ ಅಮರಲಿಂಗೇಶ್ವರಕ್ಕೆ ತೆರಳಿ ಅಲ್ಲಿ ಮಕರ ಸಂಕ್ರಮಣದ ಪುಣ್ಯ ಸ್ನಾನ ಮಾಡಿ ಪೂಜೆ ಸಲ್ಲಿಸಿದರು’ ಎಂದು ಅಮರೇಶ ಸೂಗೂರು, ಸದ್ದಾಂ ಟೊಣ್ಣುರ, ಶ್ರೀಧರ ಹಿರೇಮಠ ಹೇಳಿದರು.</p>.<p>ಹುಣಸಗಿ ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಕೆಲವರು ತಮ್ಮ ಮನೆಗಳಲ್ಲಿಯೇ ಕುಟುಂಬದೊಂದಿಗೆ ಹಬ್ಬ ಆಚರಿಸಿ ಸಂಭ್ರಮಿಸಿದರು.</p>.<p>ಸಂಕ್ರಮಣದ ಶುಭ ಗಳಿಗೆಯಲ್ಲಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಸೂರ್ಯದೇವರಿಗೆ ಅರ್ಘ್ಯ ನೀಡುವದರಿಂದ ಸಕಲ ದೋಷ ಪರಿಹಾರವಾಗುತ್ತದೆ ಎಂಬ ನಂಬಿಕೆಯಿಂದ ಜನರು ಕೃಷ್ಣೆಯಲ್ಲಿ ಮಿಂದು ಅರ್ಘ್ಯ ಅರ್ಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸಗಿ</strong>: ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿ ಗ್ರಾಮೀಣ ಭಾಗದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.</p>.<p>ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಛಾಯಾ ಭಗವತಿ ದೇವಸ್ಥಾನದ ತಟದಲ್ಲಿರುವ ಕೃಷ್ಣಾ ನದಿಯಲ್ಲಿ ಭಕ್ತರು ಮಿಂದು ಬಳಿಕ ಛಾಯಾ ಭಗವತಿ ದೇವರಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಕೃಷ್ಣಾ ನದಿಯ ಗಜಗಾತ್ರದ ಕಲ್ಲು ಬಂಡೆಗಳ ಮೇಲೆ ಹಾಗೂ ಅದರ ತಳಭಾಗದ ನೆರಳಿನಲ್ಲಿ ಕುಳಿತು ಮನೆಯಿಂದ ತಂದ ತರಹೇವಾರಿ ಭೋಜನ ಸವಿದರು.</p>.<p>‘ಇನ್ನೂ ಕೆಲವರು ಕೃಷ್ಣಾ ನದಿಗೆ ಹೊಂದಿಕೊಂಡಿರುವ ನಿಸರ್ಗರಮಣೀಯ ಅಮರಲಿಂಗೇಶ್ವರಕ್ಕೆ ತೆರಳಿ ಅಲ್ಲಿ ಮಕರ ಸಂಕ್ರಮಣದ ಪುಣ್ಯ ಸ್ನಾನ ಮಾಡಿ ಪೂಜೆ ಸಲ್ಲಿಸಿದರು’ ಎಂದು ಅಮರೇಶ ಸೂಗೂರು, ಸದ್ದಾಂ ಟೊಣ್ಣುರ, ಶ್ರೀಧರ ಹಿರೇಮಠ ಹೇಳಿದರು.</p>.<p>ಹುಣಸಗಿ ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಬಹುತೇಕ ಎಲ್ಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಕೆಲವರು ತಮ್ಮ ಮನೆಗಳಲ್ಲಿಯೇ ಕುಟುಂಬದೊಂದಿಗೆ ಹಬ್ಬ ಆಚರಿಸಿ ಸಂಭ್ರಮಿಸಿದರು.</p>.<p>ಸಂಕ್ರಮಣದ ಶುಭ ಗಳಿಗೆಯಲ್ಲಿ ನದಿಯಲ್ಲಿ ಪುಣ್ಯ ಸ್ನಾನ ಮಾಡಿ ಸೂರ್ಯದೇವರಿಗೆ ಅರ್ಘ್ಯ ನೀಡುವದರಿಂದ ಸಕಲ ದೋಷ ಪರಿಹಾರವಾಗುತ್ತದೆ ಎಂಬ ನಂಬಿಕೆಯಿಂದ ಜನರು ಕೃಷ್ಣೆಯಲ್ಲಿ ಮಿಂದು ಅರ್ಘ್ಯ ಅರ್ಪಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>