ಯಾದಗಿರಿ: ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಸೆಲ್ಕೊ ಕಂಪನಿಯಿಂದ ಅಳವಡಿಸಿರುವ ಸ್ಮಾರ್ಟ್ ಕ್ಲಾಸ್ ಸದುಪಯೋಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು.
ನಗರದ ಸರ್ಕಾರಿಕನ್ಯಾಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬರುತ್ತದೆ. ಈಸ್ಮಾರ್ಟ್ ಕ್ಲಾಸ್ ಮೂಲಕ ಫಲಿತಾಂಶ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಜಿಲ್ಲೆಯ 122 ಶಾಲೆಗಳಲ್ಲಿಸ್ಮಾರ್ಟ್ ಕ್ಲಾಸ್ ಅಳವಡಿಸಿದ್ದು, ಶೈಕ್ಷಣಿಕ ವರ್ಷ ಆರಂಭವಾದ ಮೇಲೆ ಸದುಪಯೋಗವಾಗಲಿ ಎಂದರು.
ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್, ಡಿಡಿಪಿಐ ಶ್ರೀನಿವಾಸ ರೆಡ್ಡಿ, ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸನಗೌಡ ಯಡಿಯಾಪುರ ಸೇರಿದಂತೆ ಹಲವರಿದ್ದರು.