<p><strong>ಯಾದಗಿರಿ</strong>: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರದಿಂದ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಸಂಪೂರ್ಣವಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.</p>.<p>ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆ ಮತ್ತು ಮಹತ್ವಾಕಾಂಕ್ಷಿ ಬ್ಲಾಕ್ ವಡಗೇರಾ ಯೋಜನೆಯಡಿ ಸಂಪೂರ್ಣ ಅಭಿಯಾನ ಸಮ್ಮಾನ ಸಮಾರೋಪ ಮತ್ತು ಆಕಾಂಕ್ಷ ಹಾಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಧಕ ಅಧಿಕಾರಿ, ಸಿಬ್ಬಂದಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಿ ಅವರು ಮಾತನಾಡಿದರು.<br><br> ಅಭಿವೃದ್ಧಿಗಾಗಿ ಸರ್ಕಾರ ನೀಡಿದ ಸೂಚಂಕ್ಯಗಳಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆ ತನ್ನ ನಿಗದಿತ ಗುರಿ 6 ತಲುಪುವ ಮೂಲಕ ಗುರಿ ತಲುಪಿದರೆ, ವಡಗೇರಾ ಬ್ಲಾಕ್ ಆರಲ್ಲಿ ಐದು ಕೆಲಸಗಳನ್ನು ಮಾಡುವ ಮೂಲಕ ಹೆಚ್ಚಿನ ಸಾಧನೆ ಮಾಡಿದೆ ಎಂದರು.</p>.<p>ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದಿಸಿದ ಡಿಸಿ ಅವರು, ಮುಂದೆ ಕೂಡಾ ಇದೆ ರೀತಿ ಕೆಲಸ ಮಾಡುವಂತೆ ಸಲಹೆ ನೀಡಿದರು.<br><br> ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ ಲವೀಶ್ ಒರಡಿಯಾ, ಈ ಸಾಧನೆಗೆ ಆಶಾ, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಕಿದ ಶ್ರಮಕ್ಕೆ ಫಲ ಸಿಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಆದೇಶದಂತೆ ಈ ಕಾರ್ಯಕ್ರಮ ಆಯೋಜಿಸಿ, ಗುರಿ ತಲುಪಲು ಶ್ರಮಿಸಿದ ತಳಮಟ್ಟದಿಂದ ಹಿರಿಯ ಅಧಿಕಾರಿಗಳನ್ನು ಗುರುತಿಸಿ ಪ್ರಮಾಣ ಪತ್ರ ನೀಡುವ ಮೂಲಕ ಗೌರವಿಸಲಾಗಿದೆ ಎಂದರು.<br><br> ಇನ್ನೂ ಹೆಚ್ಚಿನ ರೀತಿಯಲ್ಲಿ ನಾವೆಲ್ಲರೂ ಕೆಲಸ ಮಾಡುವ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯನ್ನು ಯಶಸ್ಸಿಯಾಗಿ ಮಾಡೋಣ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಸಿಪಿಒ ಕುಮಲಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು. <br> ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು. ಅಧಿಕಾರಿ ರಿಯಾಜ್ ಪಟೇಲ್ ನಿರೂಪಿಸಿದರು.</p>.<p> <strong>ಸೀರೆ ಖರೀದಿಸಿದ ಡಿಸಿ !</strong></p><p>ಮೂರು ದಿನಗಳವರೆಗೂ ಇರುವ ಆಕಾಂಕ್ಷಾ ಹಾಟ್ ನ ವಿವಿಧ ಮಳಿಗೆಗಳಿಗೆ ಚಾಲನೆ ನೀಡಿದ ಡಿಸಿ ಹರ್ಷಲ್ ಭೋಯರ್ ಅವರು ಸಿರಿ ಮಳಿಗೆ ಕಾಣುತ್ತಲೇ ಅಲ್ಲಿಗೆ ತೆರಳಿ ಸೀರೆಯೊಂದು ಖರೀದಿಸಿದರು. ಅದೇ ರೀತಿ ಪೆನ್ಸಿಲ್ ಇತರೆ ವಸ್ತುಗಳನ್ನು ಹಣ ನೀಡಿ ಖರೀದಿಸಿದ್ದು ಗಮನ ಸೆಳೆಯಿತು. ಈ ವೇಳೆ ಅಲ್ಲಿ ಹಾಕಲಾಗಿರುವ ವಿವಿಧ ವಸ್ತುಗಳ ಮಾರಾಟದ ಸುಮಾರು 15ಕ್ಕೂ ಹೆಚ್ಚು ಮಳಿಗೆಗಿಗೆ ಎಸ್ಪಿ ಪೃಥ್ವಿಕ್ ಶಂಕರ್ ಜಿಪಂ ಸಿಇಒ ಲವೀಶ್ ಒರಡಿಯಾ ಅವರ ಜೊತೆ ಭೇಟಿ ನೀಡಿದ ಡಿಸಿ ಅಲ್ಲಿನ ವಿವಿಧ ವಸ್ತುಗಳ ಬಗ್ಗೆ ತಿಳಿದುಕೊಂಡರು. ಮೂರು ದಿನಗಳ ಈ ಆಕಾಂಕ್ಷಾ ಹಾಟ್ ಸ್ಥಳಕ್ಕೆ ಜನರು ಹೆಚ್ಚಿಗೆ ಬಂದು ವಸ್ತುಗಳನ್ನು ಖರೀದಿಸಿ ವ್ಯಾಪಾರಕ್ಕೆ ಪ್ರೋತ್ಸಾಹ ನೀಡಬೇಕೆಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸೇರಿದಂತೆ ಎಲ್ಲ ಇಲಾಖೆಗಳ ಹಿರಿಯ, ಕಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರ ಸಹಕಾರದಿಂದ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಜಿಲ್ಲೆಯ ಕನಸು ನನಸು ಮಾಡಲು ಸಂಪೂರ್ಣವಾಗಿ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಹೇಳಿದರು.</p>.<p>ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ಜಿಲ್ಲೆ ಮತ್ತು ಮಹತ್ವಾಕಾಂಕ್ಷಿ ಬ್ಲಾಕ್ ವಡಗೇರಾ ಯೋಜನೆಯಡಿ ಸಂಪೂರ್ಣ ಅಭಿಯಾನ ಸಮ್ಮಾನ ಸಮಾರೋಪ ಮತ್ತು ಆಕಾಂಕ್ಷ ಹಾಟ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾಧಕ ಅಧಿಕಾರಿ, ಸಿಬ್ಬಂದಿಗೆ ಪ್ರಮಾಣಪತ್ರ ವಿತರಿಸಿ ಗೌರವಿಸಿ ಅವರು ಮಾತನಾಡಿದರು.<br><br> ಅಭಿವೃದ್ಧಿಗಾಗಿ ಸರ್ಕಾರ ನೀಡಿದ ಸೂಚಂಕ್ಯಗಳಲ್ಲಿ ಮಹತ್ವಾಕಾಂಕ್ಷಿ ಜಿಲ್ಲೆ ತನ್ನ ನಿಗದಿತ ಗುರಿ 6 ತಲುಪುವ ಮೂಲಕ ಗುರಿ ತಲುಪಿದರೆ, ವಡಗೇರಾ ಬ್ಲಾಕ್ ಆರಲ್ಲಿ ಐದು ಕೆಲಸಗಳನ್ನು ಮಾಡುವ ಮೂಲಕ ಹೆಚ್ಚಿನ ಸಾಧನೆ ಮಾಡಿದೆ ಎಂದರು.</p>.<p>ಇದಕ್ಕಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದಿಸಿದ ಡಿಸಿ ಅವರು, ಮುಂದೆ ಕೂಡಾ ಇದೆ ರೀತಿ ಕೆಲಸ ಮಾಡುವಂತೆ ಸಲಹೆ ನೀಡಿದರು.<br><br> ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಪಂ ಸಿಇಒ ಲವೀಶ್ ಒರಡಿಯಾ, ಈ ಸಾಧನೆಗೆ ಆಶಾ, ಅಂಗನವಾಡಿ ಕಾರ್ಯಕರ್ತರು, ಶಿಕ್ಷಕರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಕಿದ ಶ್ರಮಕ್ಕೆ ಫಲ ಸಿಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ಆದೇಶದಂತೆ ಈ ಕಾರ್ಯಕ್ರಮ ಆಯೋಜಿಸಿ, ಗುರಿ ತಲುಪಲು ಶ್ರಮಿಸಿದ ತಳಮಟ್ಟದಿಂದ ಹಿರಿಯ ಅಧಿಕಾರಿಗಳನ್ನು ಗುರುತಿಸಿ ಪ್ರಮಾಣ ಪತ್ರ ನೀಡುವ ಮೂಲಕ ಗೌರವಿಸಲಾಗಿದೆ ಎಂದರು.<br><br> ಇನ್ನೂ ಹೆಚ್ಚಿನ ರೀತಿಯಲ್ಲಿ ನಾವೆಲ್ಲರೂ ಕೆಲಸ ಮಾಡುವ ಮೂಲಕ ಕೇಂದ್ರ ಸರ್ಕಾರದ ಈ ಯೋಜನೆಯನ್ನು ಯಶಸ್ಸಿಯಾಗಿ ಮಾಡೋಣ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.<br> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ಸಿಪಿಒ ಕುಮಲಯ್ಯ ಅತಿಥಿಗಳಾಗಿ ಭಾಗವಹಿಸಿದ್ದರು. <br> ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಇತರರಿದ್ದರು. ಅಧಿಕಾರಿ ರಿಯಾಜ್ ಪಟೇಲ್ ನಿರೂಪಿಸಿದರು.</p>.<p> <strong>ಸೀರೆ ಖರೀದಿಸಿದ ಡಿಸಿ !</strong></p><p>ಮೂರು ದಿನಗಳವರೆಗೂ ಇರುವ ಆಕಾಂಕ್ಷಾ ಹಾಟ್ ನ ವಿವಿಧ ಮಳಿಗೆಗಳಿಗೆ ಚಾಲನೆ ನೀಡಿದ ಡಿಸಿ ಹರ್ಷಲ್ ಭೋಯರ್ ಅವರು ಸಿರಿ ಮಳಿಗೆ ಕಾಣುತ್ತಲೇ ಅಲ್ಲಿಗೆ ತೆರಳಿ ಸೀರೆಯೊಂದು ಖರೀದಿಸಿದರು. ಅದೇ ರೀತಿ ಪೆನ್ಸಿಲ್ ಇತರೆ ವಸ್ತುಗಳನ್ನು ಹಣ ನೀಡಿ ಖರೀದಿಸಿದ್ದು ಗಮನ ಸೆಳೆಯಿತು. ಈ ವೇಳೆ ಅಲ್ಲಿ ಹಾಕಲಾಗಿರುವ ವಿವಿಧ ವಸ್ತುಗಳ ಮಾರಾಟದ ಸುಮಾರು 15ಕ್ಕೂ ಹೆಚ್ಚು ಮಳಿಗೆಗಿಗೆ ಎಸ್ಪಿ ಪೃಥ್ವಿಕ್ ಶಂಕರ್ ಜಿಪಂ ಸಿಇಒ ಲವೀಶ್ ಒರಡಿಯಾ ಅವರ ಜೊತೆ ಭೇಟಿ ನೀಡಿದ ಡಿಸಿ ಅಲ್ಲಿನ ವಿವಿಧ ವಸ್ತುಗಳ ಬಗ್ಗೆ ತಿಳಿದುಕೊಂಡರು. ಮೂರು ದಿನಗಳ ಈ ಆಕಾಂಕ್ಷಾ ಹಾಟ್ ಸ್ಥಳಕ್ಕೆ ಜನರು ಹೆಚ್ಚಿಗೆ ಬಂದು ವಸ್ತುಗಳನ್ನು ಖರೀದಿಸಿ ವ್ಯಾಪಾರಕ್ಕೆ ಪ್ರೋತ್ಸಾಹ ನೀಡಬೇಕೆಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>