<p><strong>ವಡಗೇರಾ:</strong> ‘ರೈತರು ಸಕಾಲದಲ್ಲಿ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ರೋಗರುಜಿನಗಳಿಂದ ರಕ್ಷಿಸಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಸವರಾಜ. ಜಿ. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಕಂದಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>6 ತಿಂಗಳು ಮೇಲ್ಪಟ್ಟ ಜಾನುವಾರುಗಳಿಗೆ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೋಗ ಬಾಧೆಗಳು ಬಾರದಂತೆ ಇಲಾಖೆ ವತಿಯಿಂದ ತಾಲ್ಲೂಕಿನಾದ್ಯಂತ ಕಾಲು ಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈತರು ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.</p>.<p>ಸಮಯಕ್ಕೆ ಸರಿಯಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವುದರಿಂದ ಜಾನುವಾರುಗಳು ಆರೋಗ್ಯದಿಂದ ಇರಲು ಸಾಧ್ಯ. ಇಲಾಖೆಯ ಸಿಬ್ಬಂದಿ ಈಗಾಗಲೇ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದು ರೈತ ಬಾಂಧವರು ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಪಶು ಇಲಾಖೆಯ ಸಿಬ್ಬಂದಿಗಳಾದ ಡಾ. ಪ್ರಿಯಾಂಕ ರೆಡ್ಡಿ, ನಾಗರಾಜ, ಮೈಬೂಬಸಾಬ, ಹಸನ, ರಜಾಕ, ಸಿದ್ದಾರೂಢ, ಹನುಮಂತ, ರಫೀಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡಗೇರಾ:</strong> ‘ರೈತರು ಸಕಾಲದಲ್ಲಿ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವ ಮೂಲಕ ರೋಗರುಜಿನಗಳಿಂದ ರಕ್ಷಿಸಬೇಕು’ ಎಂದು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಬಸವರಾಜ. ಜಿ. ಪಾಟೀಲ ಹೇಳಿದರು.</p>.<p>ತಾಲ್ಲೂಕಿನ ಕಂದಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>6 ತಿಂಗಳು ಮೇಲ್ಪಟ್ಟ ಜಾನುವಾರುಗಳಿಗೆ ಮುಂಜಾಗ್ರತಾ ಕ್ರಮವಾಗಿ ಯಾವುದೇ ರೋಗ ಬಾಧೆಗಳು ಬಾರದಂತೆ ಇಲಾಖೆ ವತಿಯಿಂದ ತಾಲ್ಲೂಕಿನಾದ್ಯಂತ ಕಾಲು ಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈತರು ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.</p>.<p>ಸಮಯಕ್ಕೆ ಸರಿಯಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವುದರಿಂದ ಜಾನುವಾರುಗಳು ಆರೋಗ್ಯದಿಂದ ಇರಲು ಸಾಧ್ಯ. ಇಲಾಖೆಯ ಸಿಬ್ಬಂದಿ ಈಗಾಗಲೇ ಮನೆ ಮನೆಗೆ ತೆರಳಿ ಜಾನುವಾರುಗಳಿಗೆ ಲಸಿಕೆ ನೀಡುತ್ತಿದ್ದು ರೈತ ಬಾಂಧವರು ನಿರ್ಲಕ್ಷ್ಯ ಮಾಡಬಾರದು ಎಂದು ತಿಳಿಸಿದರು.</p>.<p>ಈ ಸಂದರ್ಭದಲ್ಲಿ ಪಶು ಇಲಾಖೆಯ ಸಿಬ್ಬಂದಿಗಳಾದ ಡಾ. ಪ್ರಿಯಾಂಕ ರೆಡ್ಡಿ, ನಾಗರಾಜ, ಮೈಬೂಬಸಾಬ, ಹಸನ, ರಜಾಕ, ಸಿದ್ದಾರೂಢ, ಹನುಮಂತ, ರಫೀಕ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>