ಜೇಡಿ ಮಣ್ಣಿನಿಂದ ಮತ್ತು ನೈಸರ್ಗಿಕ ಬಣ್ಣ ಲೇಪಿತ, ಎಲೆ ಹೂವುಗಳಿಂದ ತಯಾರಿಸಿದ ನೈಸರ್ಗಿಕ ಗಣೇಶ ಮೂರ್ತಿಗಳನ್ನು ಸ್ಥಾಪಿಸಬೇಕು. ಬಾವಿ, ಕೆರೆ, ಹೊಳೆ ಹಾಗೂ ನದಿಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಬಾರದು. ಸ್ಥಳೀಯ ಸಂಸ್ಥೆಗಳು ನಿರ್ಮಿಸಿದ ತಾತ್ಕಾಲಿಕ ಹೊಂಡ ಹಾಗೂ ಸಂಚಾರಿ ತೊಟ್ಟಿಗಳಲ್ಲಿ ವಿಸರ್ಜಿಸಬೇಕು. ಈ ಮೂಲಕ ಪರಿಸರ ಸ್ನೇಹಿಯಾಗಿ ಗಣೇಶ ಹಬ್ಬವನ್ನು ಆಚರಿಸಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗಳು ಮನವಿ ಮಾಡಿದ್ದಾರೆ.