ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಕೃಷ್ಣಾ ನದಿಯಲ್ಲಿ ಮೊಸಳೆ ದಾಳಿ, ವ್ಯಕ್ತಿ ಶವವಾಗಿ ಪತ್ತೆ

Last Updated 25 ನವೆಂಬರ್ 2021, 5:50 IST
ಅಕ್ಷರ ಗಾತ್ರ

ವಡಗೇರಾ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಕೊಂಕಲ್‌ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಬುಧವಾರ ಕಟ್ಟಿಗೆ ತರಲು ತೆರಳಿದ್ದ ವೆಂಕಟೇಶ (40) ಮೊಸಳೆ ದಾಳಿಗೆ ಬಲಿಯಾಗಿದ್ದು, ಗುರುವಾರ ಶವವಾಗಿ ಪತ್ತೆಯಾಗಿದ್ದಾರೆ.

ಬುಧವಾರ ಸಂಜೆ ಕಟ್ಟಿಗೆ ತರಲು ವೆಂಕಟೇಶ ಕೃಷ್ಣಾ ನದಿ ದಡಕ್ಕೆ ತೆರಳಿದ್ದರು. ನಂತರ ನೀರು ಕುಡಿಯಲು ಕೃಷ್ಣಾ ನದಿಗೆ ಇಳಿದಾಗ ಮೊಸಳೆ ಎಳೆದೊಯ್ದದಿದೆ. ವೆಂಕಟೇಶ ಪತ್ತೆಗಾಗಿ ಬುಧವಾರ ಸ್ಥಳೀಯ ಮೀನುಗಾರರು ಶೋಧ ಕಾರ್ಯ ನಡೆಸಿದ್ದರು. ರಾತ್ರಿಯಾದರೂ ಪತ್ತೆಯಾಗದ ಕಾರಣ ಹುಡುಕಾಟ ಸ್ಥಗಿತಗೊಳಿಸಿದ್ದರು. ಗುರುವಾರ ಬೆಳಿಗ್ಗೆ ಅಗ್ನಿಶಾಮಕ ದಳ ಜೊತೆ ಮೀನುಗಾರರು ಶೋಧ ನಡೆಸಿದ್ದರು.

ಘಟನೆ ಸ್ಥಳಕ್ಕೆ ತಹಶೀಲ್ದಾರ್ ಸುರೇಶ ಅಂಕಲಗಿ, ಕಂದಾಯ ನಿರೀಕ್ಷಕ ಸಂಜುಕುಮಾರ ಕವಲಿ, ಅಗ್ನಿಶಾಮಕ ದಳದ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT